AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ; ಬಿಜೆಪಿ, ಜೆಡಿಎಸ್ ಮಾಜಿ ಸಿಎಂಗಳಿಗೆ ಆಹ್ವಾನ

ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್​ ಅವರು ನಿವಾಸಕ್ಕೆ ತೆರಳಿ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡಗೆ ಸಭೆಗೆ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ; ಬಿಜೆಪಿ, ಜೆಡಿಎಸ್ ಮಾಜಿ ಸಿಎಂಗಳಿಗೆ ಆಹ್ವಾನ
ಸಿದ್ದರಾಮಯ್ಯ(ಸಂಗ್ರಹ ಚಿತ್ರ)
TV9 Web
| Edited By: |

Updated on: Aug 23, 2023 | 7:09 AM

Share

ಬೆಂಗಳೂರು, ಆಗಸ್ಟ್ 23: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ(Cauvery Water Dispute) ಆಡಳಿತ ಪಕ್ಷ ಕಾಂಗ್ರೆಸ್(Congress) ಮತ್ತು ಪ್ರತಿಪಕ್ಷ ಬಿಜೆಪಿ(BJP) ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ರಾಜ್ಯದ ಹಲವೆಡೆ ಈ ವಿಚಾರಕ್ಕೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಮತ್ತೊಂದೆಡೆ ಕೆಆರ್‌ಎಸ್ ಜಲಾಶಯದ(KRS Dam) ನೀರಿನ ಮಟ್ಟ ಕುಸಿಯುತ್ತಿದ್ದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು ಹೊಸ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಇನ್ನು ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ವಿಧಾನಸೌಧದಲ್ಲಿ CM ಸಿದ್ದರಾಮಯ್ಯ(Siddaramaiah) ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.

ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್​ ಅವರು ನಿವಾಸಕ್ಕೆ ತೆರಳಿ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡಗೆ ಸಭೆಗೆ ಆಹ್ವಾನಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಸಚಿವ ಗೋವಿಂದ ಕಾರಜೋಳರನ್ನೂ ಸಭೆಗೆ ಕರೆಯಲಾಗಿದೆ.

ಇದನ್ನೂ ಓದಿ: ತಮಿಳುನಾಡುಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ, ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಶಪಿಸಿದ ರೈತ ಮಹಿಳೆ!

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ, ಪ್ರತಿಭಟನೆಗೆ ಕಾರಣವಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಕಾರಣ ರಾಜ್ಯದ ಬಹುತೇಕ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದ ರಾಜ್ಯಕ್ಕೆ ನೀರಿನ ಸಮಸ್ಯೆಯ ಭೀತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಸೂಕ್ತವಲ್ಲ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯದ ಕೆಲವು ಕಡೆ ಬಿಜೆಪಿ, ರೈತರು ಈ ವಿಚಾರವಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಭೆ ಸಂಬಂಧ ಟ್ವೀಟ್ ಮಾಡಿದ್ದು ಬುಧವಾರ ಸಭೆ ಕರೆಯಲಾಗಿದೆ, ಸಭೆಯಲ್ಲಿ ಏನು ತೀರ್ಮಾನ ಆಗುತ್ತದೆಯೋ ಅದರಂತೆ ಹೋಗುತ್ತೀವಿ. ಸರ್ವಪಕ್ಷ ನಿಯೋಗ ಹೋಗಲು ಸೂಚಿಸಿದರೆ ಅದಕ್ಕೂ ಸಿದ್ಧ ಎಂದಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?