AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ

ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿದ್ದ ಆದೇಶವನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಕಾವೇರಿ ಕೊಳ್ಳದ 4 ಡ್ಯಾಮ್​ಗಳ ಒಳ ಹರಿವಿನಲ್ಲಿ ಭಾರಿ ಇಳಿಕೆ ಕಂಡುಬಂದಿರುವ ಹಿನ್ನೆಲೆ ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದು ಸಿಡಬ್ಲ್ಯಎಂಎಗೆ ಕರ್ನಾಟಕ ತಿಳಿಸಿದೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ
CWMAಗೆ ಕರ್ನಾಟಕ ಮೇಲ್ಮನವಿImage Credit source: PTI
ಪ್ರಸನ್ನ ಹೆಗಡೆ
|

Updated on: Sep 16, 2026 | 4:50 PM

Share

ಬೆಂಗಳೂರು/ ನವದೆಹಲಿ, ಸೆಪ್ಟೆಂಬರ್​​ 16: ನೆರೆ ರಾಜ್ಯ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಮೇಲ್ಮನವಿ ಸಲ್ಲಿಸಿದೆ. ಸೆ.15ರ ವೇಳೆಗೆ ಕಾವೇರಿ ಕೊಳ್ಳದ 4 ಡ್ಯಾಮ್​ಗಳಲ್ಲಿ 55.389 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. 4 ಜಲಾಶಯಗಳ ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇಕಡಾ 52.97 ಮಾತ್ರ ನೀರಿದೆ. ಹೀಗಾಗಿ 6000 ಕ್ಯೂಸೆಕ್ ಬದಲು 3000 ಕ್ಯೂಸೆಕ್​ಗೆ ನೀರಿನ ಪ್ರಮಾಣ ಇಳಿಕೆ ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಹಿಂದೆ ಆದೇಶಿಸಿತ್ತು.

ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದ ಕರ್ನಾಟಕ

ಜೂ.1ರಿಂದ ಸೆ.15ರವರೆಗೆ 4 ಡ್ಯಾಮ್​ಗಳಿಗೆ ಒಳಹರಿವು 111 ಟಿಎಂಸಿ ಮಾತ್ರ ಇದ್ದು, ಇದೇ ಅವಧಿಯ 30 ವರ್ಷಗಳ ಸರಾಸರಿ ಒಳಹರಿವು 228.108 ಟಿಎಂಸಿಯಾಗಿದೆ. ಈ ವರ್ಷ ಶೇಕಡಾ 51ಕ್ಕೂ ಹೆಚ್ಚು ಒಳಹರಿವು ಕೊರತೆಯಿದೆ. ಆ.27ರಂದು 26,930 ಕ್ಯೂಸೆಕ್ ಇದ್ದ 4 ಡ್ಯಾಮ್​ಗಳ ಒಳಹರಿವು ಸೆ.8ರಂದು 3,887 ಕ್ಯೂಸೆಕ್​ಗೆ ಕುಸಿದಿದೆ. ಸುಮಾರು 15 ದಿನಗಳಲ್ಲಿ ಶೇಕಡಾ 85.57ರಷ್ಟು ಇಳಿಕೆ ಕಂಡುಬಂದಿದೆ. ಸೆ.15ರ ವೇಳೆ ಒಳಹರಿವು ಸುಮಾರು 3 ಸಾವಿರ ಕ್ಯೂಸೆಕ್​ಗೆ ಇಳಿದಿದ್ದು, ಈ ಹಿನ್ನೆಲೆ ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದು ಸಿಡಬ್ಲ್ಯಎಂಎಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ಕರ್ನಾಟಕ ಸರ್ಕಾರ ಉಲ್ಲೇಖಿಸಿದೆ.

LIVE TV

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಆದೇಶ

ಒಳಹರಿವಿನ ಕುಸಿತಕ್ಕೆ ಸೆಪ್ಟೆಂಬರ್ 8ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ 142ನೇ ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಪ್ರತಿನಿಧಿ ನೀಡಿದ ಹೇಳಿಕೆಯೂ ಪೂರಕವಾಗಿದೆ. ಸೆಪ್ಟೆಂಬರ್ 8ರಿಂದ 18ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಪ್ರಮುಖ ಮಳೆಯ ಅವಧಿ ಇರುವ ಸಾಧ್ಯತೆ ಇಲ್ಲ. ಈ ಅವಧಿಯಲ್ಲಿ ನದಿಯ ಜಲಾನಯನ ಪ್ರದೇಶದಲ್ಲಿ ಒಟ್ಟಾರೆ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದ್ದು, ಈ ಪರಿಸ್ಥಿತಿ 2026ರ ಅಕ್ಟೋಬರ್ ಮಧ್ಯಭಾಗದವರೆಗೂ ಮುಂದುವರಿಯುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದರು. ಇಷ್ಟಾದರೂ, ಪ್ರಸಕ್ತ ಜಲ ವರ್ಷದಲ್ಲಿ ಕರ್ನಾಟಕವು ನೀಡಲಾದ ಪ್ರತಿಯೊಂದು ನಿರ್ದೇಶನವನ್ನೂ ವಾಸ್ತವವಾಗಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ರೀತಿಯಲ್ಲಿ ಪಾಲಿಸಿದೆ ಎಂದು ವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಮನವರಿಕೆ ಮಾಡಿದೆ.

ವರದಿ: ನಟರಾಜ್​​, ಟಿವಿ9 ನವದೆಹಲಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!