AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ನಡುವೆಯೂ ಕೆಆರ್​ಎಸ್​ ಡ್ಯಾಂನಿಂದ ಹೊರಹರಿವು ಹೆಚ್ಚಳ: ಜಲಾಶಯದ ನೀರಿನ ಮಟ್ಟ ಇಲ್ಲಿದೆ

Cauvery Water Dispute: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ 3,838 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ನಾಲೆಗಳಿಗೆ 3,036 ಕ್ಯೂಸೆಕ್ ನೀರು ಬಿಡಲಾಗಿದೆ. ಸೆಪ್ಟೆಂಬರ್ 27 ರವರೆಗೆ ಪ್ರತಿದಿನ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಸಿಡಬ್ಲೂಎಮ್​ಎ ಸೂಚಿಸಿದೆ.

ವಿರೋಧದ ನಡುವೆಯೂ ಕೆಆರ್​ಎಸ್​ ಡ್ಯಾಂನಿಂದ ಹೊರಹರಿವು ಹೆಚ್ಚಳ: ಜಲಾಶಯದ ನೀರಿನ ಮಟ್ಟ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
TV9 Web
| Edited By: |

Updated on:Sep 25, 2023 | 10:17 AM

Share

ಬೆಂಗಳೂರು ಸೆ.25: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ನಡುವೆಯೇ ಕೆಆರ್‌ಎಸ್‌ (KRS) ಆಣೆಕಟ್ಟೆಯಿಂದ ಹೊರಹರಿವು ಹೆಚ್ಚಳವಾಗಿದೆ. ಶನಿವಾರ ಮತ್ತು ಭಾನುವಾರ ಹೆಚ್ಚುವರಿಯಾಗಿ 800-1,000 ಕ್ಯೂಸೆಕ್ ನೀರು ಬಿಡಲಾಗಿದೆ. ಭಾನುವಾರ 6,874 ಕ್ಯೂಸೆಕ್ ನೀರು ಬಿಡಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ನಿರ್ದೇಶನದಂತೆ 3,838 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ನಾಲೆಗಳಿಗೆ 3,036 ಕ್ಯೂಸೆಕ್ ನೀರು ಬಿಡಲಾಗಿದೆ. ಸೆಪ್ಟೆಂಬರ್ 27 ರವರೆಗೆ ಪ್ರತಿದಿನ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚಿಸಿದೆ. ಹಾಗಿದ್ದರೇ ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಇಲ್ಲಿದೆ ವಿವರ

  • ಕೆಆರ್​ಎಸ್ ಜಲಾಶಯ

ಜಲಾಶಯದ ಗರಿಷ್ಠಮಟ್ಟ – 124.80 ಅಡಿ, ಇಂದಿನ ಮಟ್ಟ – 96.70 ಅಡಿ, ಒಳಹರಿವು – 5993 ಸಾವಿರ ಕ್ಯೂಸೆಕ್, ಒಟ್ಟ ಹೊರಹರಿವು – 6716 ಸಾವಿರ ಕ್ಯೂಸೆಕ್, ನದಿಗೆ – 4105 ಕ್ಯೂಸೆಕ್

  • ಹೇಮಾವತಿ ಜಲಾಶಯ

ಹೇಮಾವತಿ ಜಲಾಶಯದಿಂದಲೂ ಕೆ.ಆರ್.ಎಸ್​ನತ್ತ ನೀರು ಹರಿಯುತ್ತಿದೆ. ಅಧಿಕಾರಿಗಳು ಕಳೆದ ಒಂದೂವರೆ ತಿಂಗಳಿನಿಂದ ನಿತ್ಯ 1300 ಕ್ಯುಸೆಕ್ ನೀರು ಹರಿಸುತ್ತಿದ್ದಾರೆ.

ಇಂದಿನ‌ ನೀರಿನ ಮಟ್ಟ – 2896.90 ಅಡಿ, ಗರಿಷ್ಠ ನೀರಿನ ಮಟ್ಟ – 2922 ಅಡಿ, ಒಟ್ಟು ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ, ಇಂದಿನ ಸಂಗ್ರಹ ಸಾಮರ್ಥ್ಯ – 17.904 ಟಿಎಂಸಿ, ಬಳಕೆಗೆ ಲಭ್ಯವಿರುವ ನೀರು‌ – 13.565 ಟಿಎಂಸಿ, ಒಳಹರಿವು – 2704 ಸಾವಿರ ಕ್ಯೂಸೆಕ್, ಹೊರಹರಿವು – 1300 ಸಾವಿರ ಕ್ಯೂಸೆಕ್

ಇದನ್ನೂ ಓದಿ: ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ: ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ

  • ಹಾರಂಗಿ ಜಲಾಶಯ

ಗರಿಷ್ಟ ಸಾಮರ್ಥ್ಯ – 2859, ಇಂದಿನ ಸಾಮರ್ಥ್ಯ – 2855.94, ಒಳಹರಿವು – 992 ಅಡಿ, ಹೊರ ಹರಿವು -1600 ಕ್ಯೂಸೆಕ್​ ನಾಲೆಗೆ- 1200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

  • ಕಬಿನಿ ಜಲಾಶಯ

ಗರಿಷ್ಠ ಸಾಮರ್ಥ್ಯ – 84 ಅಡಿ, ಇಂದಿನ‌ ‌ನೀರಿನ ಮಟ್ಟ – 74.24 ಅಡಿ, ಇಂದಿನ‌ ಒಳಹರಿವು – 2,126 ಕ್ಯೂಸೆಕ್‌‌

ತಮಿಳುನಾಡಿಗೆ ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್​​​ಗೆ ಕರೆ ನೀಡಿವೆ. ಇದಕ್ಕೆ ಸಾರಿಗೆ ಇಲಾಖೆ ನೌಕರರು, ಹೊಟೇಲ್​ ಮಾಲಿಕರು, ಓಲಾ, ಊಬರ್​​ ಸೇರಿಂದ ಎಲ್ಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Mon, 25 September 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ