AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.26ಕ್ಕೆ ಬೆಂಗಳೂರು ಬಂದ್ ಫಿಕ್ಸ್?: ರಸ್ತೆಗಳಿಯಲ್ಲ ಬಸ್, ಓಲಾ, ಉಬರ್; ಯಾರ್ಯಾರ ಬೆಂಬಲ?

ಸೆ.26ರ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ ಮಂಗಳವಾರ ಬೆಂಗಳೂರು ಬಹುತೇಕ ಸ್ಥಬ್ಧವಾಗಲಿದೆ. ಬಂದ್​ಗೆ ಯಾರ್ಯಾರ ಬೆಂಬಲವಿದೆ ಎಂಬ ಮಾಹಿತಿ ಇಲ್ಲಿದೆ. 60ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲು ಸೂಚಿಸಿವೆ.

ಸೆ.26ಕ್ಕೆ ಬೆಂಗಳೂರು ಬಂದ್ ಫಿಕ್ಸ್?: ರಸ್ತೆಗಳಿಯಲ್ಲ ಬಸ್, ಓಲಾ, ಉಬರ್; ಯಾರ್ಯಾರ ಬೆಂಬಲ?
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Sep 24, 2023 | 4:07 PM

Share

ಬೆಂಗಳೂರು, ಸೆ.24: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ (Cauvery Water Dispute) ಸಂಬಂಧಿಸಿ ದಿನದಿಂದ ದಿನಕ್ಕೆ ಆಕ್ರೋಶದ ಕಿಡಿ ಹೆಚ್ಚಾಗುತ್ತಿದೆ. ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ನಿನ್ನೆ ಮಂಡ್ಯ, ಮದ್ದೂರು ಬಂದ್ ಮಾಡಿ ರೈತರು ಕಿಡಿಕಾರಿದ್ದರು. ಈಗ ಸೆ.26ರ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು (Bengaluru Bandh) ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ ಮಂಗಳವಾರ ಬೆಂಗಳೂರು ಬಹುತೇಕ ಸ್ಥಬ್ಧವಾಗಲಿದೆ. ಬಂದ್​ಗೆ ಯಾರ್ಯಾರ ಬೆಂಬಲವಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಸಾರಿಗೆ ಬಸ್ ರಸ್ತೆಗಿಳಿಯುವುದಿಲ್ಲ

ಸೆ.26ರ ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ ಎಂದು ಕೆಎಸ್​ಆರ್​​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಸಾರಿಗೆ ಬಸ್ ರಸ್ತೆಗಿಳಿಯುವುದಿಲ್ಲ. ಬಿಎಂಟಿಸಿ ಸಾರಿಗೆ ಸಿಬ್ಬಂದಿ ಮಂಗಳವಾರ ಬಂದ್​ಗೆ ಬೆಂಬಲಿಸಲಿದ್ದಾರೆ. ಘಟಕದಿಂದ ಬಸ್ ಹೊರ ಬರಲ್ಲ, ಅಂದು ಸಿಬ್ಬಂದಿ ಗೈರಾಗಲಿದ್ದಾರೆ. ಕಾವೇರಿ ನೀರಿನ ಹೋರಾಟಕ್ಕೆ‌ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು ಎಂದರು.

ಖಾಸಗಿ ಸಾರಿಗೆ ಬಸ್​ಗಳು ಕೂಡ ರಸ್ತೆಗಿಳಿಯಲ್ಲ

ಮಂಗಳವಾರ ಬೆಂಗಳೂರು ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದರು. ಬೆಂಗಳೂರು ನಿವಾಸಿಗಳು ಬದುಕಲು ಕಾವೇರಿ ನೀರು ಬಹುಮುಖ್ಯವಾಗಿ ಬೇಕು. ಖಾಸಗಿ ಸಾರಿಗೆ ರಸ್ತೆಗಿಳಿಸದೆ ಬಂದ್​​ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಮಂಗಳವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಖಾಸಗಿ ವಾಹನಗಳು ಬಂದ್ ಆಗಿರಲಿವೆ. ಬೆಂಗಳೂರು ನಗರದಲ್ಲಿ 5-6 ಲಕ್ಷ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ತಿಳಿಸಿದರು.

ಇದನ್ನೂ ಓದಿ: ಸೆ.26 ರಂದು ಬೆಂಗಳೂರು ಬಂದ್​: ನಿರ್ಮಾಪಕರ ಸಂಘ ಸೇರಿದಂತೆ ಹಲವು ಸಂಘಗಳಿಂದ ಬೆಂಬಲ

ನೈತಿಕ ಬೆಂಬಲ ನೀಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು

ಬಂದ್​ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ನೀಡಿವೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರ ಸರ್ಕಾರದ ಹೆಗಲಿಗೆ ಹಾಕಿದ್ದಾರೆ. ಮಕ್ಕಳ ಹಿತದೃಷ್ಠಿಯಿಂದ ಸರ್ಕಾರವೇ ಶಾಲೆಗೆ ರಜೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಒತ್ತಾಯಿಸಿದ್ದಾರೆ. ಸರ್ಕಾರ ರಜೆ ನೀಡಿದ್ರೆ ನಾವು ರಜೆ ಕೊಡ್ತೀವಿ ಎಂದಿದ್ದಾರೆ.

ಬಂದ್​ಗೆ ಓಲಾ, ಉಬರ್ ಬೆಂಬಲ

ಮಂಗಳವಾರ ಬೆಂಗಳೂರು ಬಂದ್​ಗೆ ಓಲಾ, ಉಬರ್ ಸಂಘದಿಂದ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಾದ್ಯಂತ ಓಲಾ, ಉಬರ್ ಕ್ಯಾಬ್ ರಸ್ತೆಗಿಳಿಸದಿರಲು ನಿರ್ಧಾರ ಮಾಡಲಾಗಿದೆ ಎಂದು ಟಿವಿ9ಗೆ ಓಲಾ, ಉಬರ್ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಮಾಹಿತಿ ನೀಡಿದರು.

ಸರ್ಕಾರಿ ಶಾಲೆಗಳ ರಜೆ ಬಗ್ಗೆ ಗೊಂದಲ

ಮಂಗಳವಾರದ ಬಂದ್​ಗೆ ಶಿಕ್ಷಣ ಇಲಾಖೆಯಿಂದ ನಿರ್ಧಾರ ಪ್ರಕಟವಾಗಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳು ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ. ಆದರೆ ನಾಳೆಯ ಬಂದ್ ತೀವ್ರತೆ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತೆ. ಮಂಗಳವಾರ ಸರ್ಕಾರಿ ಶಾಲೆಗೆ ರಜೆ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಸರ್ಕಾರಿ ಶಾಲೆಗಳು ಇರುತ್ತಾ ಇಲ್ವಾ ಎಂಬ ಗೊಂದಲದಲ್ಲಿ ಶಾಲಾ ಮಕ್ಕಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:22 pm, Sun, 24 September 23

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್