AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿವಾದ: ವಾಟಾಳ್ ನಾಗರಾಜ್​ರಿಂದ ವಿಧಾನಸೌಧಕ್ಕೆ ಮುತ್ತಿಗೆ

Cauvery Water Dispute: ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ಮಧ್ಯಾಹ್ನ 'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ' ಹೋರಾಟಗಾರರು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದರು.

ಕಾವೇರಿ ನೀರು ವಿವಾದ: ವಾಟಾಳ್ ನಾಗರಾಜ್​ರಿಂದ ವಿಧಾನಸೌಧಕ್ಕೆ ಮುತ್ತಿಗೆ
ವಾಟಾಳ್​ ನಾಗರಾಜ್​
Vinayak Hanamant Gurav
| Edited By: |

Updated on:Oct 17, 2023 | 3:34 PM

Share

ಬೆಂಗಳೂರು ಅ.17: ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಕನ್ನಡಪರ ಸಂಘಟನೆಗಳು ಮತ್ತು ರೈತರು (Farmers) ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ವಿವಿಧ ಸಂಘಟನೆಗಳು ಬೆಂಗಳೂರು (Bengaluru) ಮತ್ತು ಕರ್ನಾಟಕ ಬಂದ್​​ಗೆ ನಡೆಯಿತು. ಆದರೂ ತಮಿಳುನಾಡಿಗೆ ನೀರು ಹರಿಯುವುದು ಮಾತ್ರ ನಿಂತಿಲ್ಲ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರತಿಭಟನೆ ಮುಂದುವರೆದಿದೆ. ಇಂದು (ಅ.17) ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ಮಧ್ಯಾಹ್ನ ‘ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ’ ಹೋರಾಟಗಾರರು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ವಿಧಾನಸೌಧ (Vidhan Soudha) ಮುತ್ತಿಗೆ ಹಾಕಲು ಯತ್ನಿಸಿದರು.

ಪೊಲೀಸರು ವಾಟಾಳ್​ ನಾಗರಾಜ್, ಕೆ.ಆರ್​.ಕುಮಾರ್ ಸೇರಿದಂತೆ ಇನ್ನಿತರ ಹೋರಾಟಗಾರರನ್ನು ದೇವರಾಜ ಅರಸು ಗೇಟ್ ಬಳಿ ತಡೆದು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಅವರು ಕಾವೇರಿ ನೀರನ್ನು ನಿರಂತರವಾಗಿ ತಮಿಳುನಾಡಿಗೆ ಬಿಡುತ್ತಿದ್ದಾರೆ. ಸಿದ್ಧರಾಮಯ್ಯನವರು ಗೌರವಯುತವಾದ ಪ್ರಭುದ್ಧ ಚಿಂತನೆ ಇರುವ ಸಿಎಂ. ಸಿಎಂ ಚಿಂತನೆ‌ ಮಾಡಬೇಕು ನೀರನ್ನು ಬಿಡಬಾರದು. ಕರ್ನಾಟಕದಿಂದ ನೀರು ಬಿಡುತ್ತಾರೆ ಅಂತ ತಮಿಳುನಾಡು ಗದ್ದಲ ಮಾಡುತ್ತಿಲ್ಲ ಎಂದರು.

ಇದನ್ನೂ ಓದಿ: ಕಾವೇರಿಗಾಗಿ ಕರವೇ ಕಾರ್ಯಕರ್ತರಿಂದ ದೆಹಲಿ ಚಲೋ, ಅ.18ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ

ಕರ್ನಾಟಕದಿಂದ ನೀರನ್ನ ಹಗಲು ರಾತ್ರಿ‌ ಎನ್ನದೇ ಬಿಡುತ್ತಿದ್ದಾರೆ. ಈ ರಾಜ್ಯಕೋಸ್ಕರ ರೈತರಿಗೋಸ್ಕರ ಬೆಂಗಳೂರಿಗೋಸ್ಕರ ನಿಮ್ಮ ಕಾಲಿಗೆ ಬಿಳುತ್ತೇವೆ ನೀರು ಬಿಡಬೇಡಿ. ಕೆಂಗಲ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜು ಅರಸು ಅವರನ್ನು ನೋಡಿದ್ದೇನೆ. ಈ ಶಾಸನ ಸಭೆಗೂ ನನಗೂ 60 ವರ್ಷ ಸಂಬಂಧ ಇದೆ. ನಾನೂ 5 ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕಬಿನಿ, ಕೆಆರ್‌ಎಸ್ ಮತ್ತು ಹಾರಂಗಿಯಲ್ಲಿ ನೀರಿಲ್ಲ. ಈ ಬಗ್ಗೆ ಪಾರ್ಲಿಮೆಂಟ್ ಸದಸ್ಯರು ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಊಟಿ, ಹೊಸುರು ನಮ್ಮದು: ವಾಟಾಳ್​ ನಾಗರಾಜ್

ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷದವರು ಓಡಾಡಿದರು. ಈ ಬಗ್ಗೆ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಬೇಕು. ಸರ್ವ ಪಕ್ಷ ನಿಯೋಗ ಹೋಗಿ ಪ್ರಧಾನಿಯವರನ್ನು ಭೇಟಿ ಆಗಬೇಕು. ತುರ್ತು ಶಾಸನ ಸಭೆಯನ್ನ ಸಿಎಂ ಕರೆಯಬೇಕು. ನಾಳೆ ತಮಿಳುನಾಡಿನ ಹೊಸುರಿಗೆ ಹೋಗುತ್ತೇವೆ. ಬೆಳಿಗ್ಗೆ 11 ಗಂಟೆಗೆ ಹೊಸುರು ಪುರಸಭೆ ಮುಂದೆ ಭಾರಿ ಪ್ರತಿಭಟನೆ ಮಾಡುತ್ತೇವೆ. ಊಟಿ, ಹೊಸುರು ನಮ್ಮದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Tue, 17 October 23

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ