AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿವಾದ: ವಾಟಾಳ್ ನಾಗರಾಜ್​ರಿಂದ ವಿಧಾನಸೌಧಕ್ಕೆ ಮುತ್ತಿಗೆ

Cauvery Water Dispute: ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ಮಧ್ಯಾಹ್ನ 'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ' ಹೋರಾಟಗಾರರು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದರು.

ಕಾವೇರಿ ನೀರು ವಿವಾದ: ವಾಟಾಳ್ ನಾಗರಾಜ್​ರಿಂದ ವಿಧಾನಸೌಧಕ್ಕೆ ಮುತ್ತಿಗೆ
ವಾಟಾಳ್​ ನಾಗರಾಜ್​
Vinayak Hanamant Gurav
| Edited By: |

Updated on:Oct 17, 2023 | 3:34 PM

Share

ಬೆಂಗಳೂರು ಅ.17: ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಕನ್ನಡಪರ ಸಂಘಟನೆಗಳು ಮತ್ತು ರೈತರು (Farmers) ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ವಿವಿಧ ಸಂಘಟನೆಗಳು ಬೆಂಗಳೂರು (Bengaluru) ಮತ್ತು ಕರ್ನಾಟಕ ಬಂದ್​​ಗೆ ನಡೆಯಿತು. ಆದರೂ ತಮಿಳುನಾಡಿಗೆ ನೀರು ಹರಿಯುವುದು ಮಾತ್ರ ನಿಂತಿಲ್ಲ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರತಿಭಟನೆ ಮುಂದುವರೆದಿದೆ. ಇಂದು (ಅ.17) ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ಮಧ್ಯಾಹ್ನ ‘ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ’ ಹೋರಾಟಗಾರರು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ವಿಧಾನಸೌಧ (Vidhan Soudha) ಮುತ್ತಿಗೆ ಹಾಕಲು ಯತ್ನಿಸಿದರು.

ಪೊಲೀಸರು ವಾಟಾಳ್​ ನಾಗರಾಜ್, ಕೆ.ಆರ್​.ಕುಮಾರ್ ಸೇರಿದಂತೆ ಇನ್ನಿತರ ಹೋರಾಟಗಾರರನ್ನು ದೇವರಾಜ ಅರಸು ಗೇಟ್ ಬಳಿ ತಡೆದು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಅವರು ಕಾವೇರಿ ನೀರನ್ನು ನಿರಂತರವಾಗಿ ತಮಿಳುನಾಡಿಗೆ ಬಿಡುತ್ತಿದ್ದಾರೆ. ಸಿದ್ಧರಾಮಯ್ಯನವರು ಗೌರವಯುತವಾದ ಪ್ರಭುದ್ಧ ಚಿಂತನೆ ಇರುವ ಸಿಎಂ. ಸಿಎಂ ಚಿಂತನೆ‌ ಮಾಡಬೇಕು ನೀರನ್ನು ಬಿಡಬಾರದು. ಕರ್ನಾಟಕದಿಂದ ನೀರು ಬಿಡುತ್ತಾರೆ ಅಂತ ತಮಿಳುನಾಡು ಗದ್ದಲ ಮಾಡುತ್ತಿಲ್ಲ ಎಂದರು.

ಇದನ್ನೂ ಓದಿ: ಕಾವೇರಿಗಾಗಿ ಕರವೇ ಕಾರ್ಯಕರ್ತರಿಂದ ದೆಹಲಿ ಚಲೋ, ಅ.18ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ

ಕರ್ನಾಟಕದಿಂದ ನೀರನ್ನ ಹಗಲು ರಾತ್ರಿ‌ ಎನ್ನದೇ ಬಿಡುತ್ತಿದ್ದಾರೆ. ಈ ರಾಜ್ಯಕೋಸ್ಕರ ರೈತರಿಗೋಸ್ಕರ ಬೆಂಗಳೂರಿಗೋಸ್ಕರ ನಿಮ್ಮ ಕಾಲಿಗೆ ಬಿಳುತ್ತೇವೆ ನೀರು ಬಿಡಬೇಡಿ. ಕೆಂಗಲ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜು ಅರಸು ಅವರನ್ನು ನೋಡಿದ್ದೇನೆ. ಈ ಶಾಸನ ಸಭೆಗೂ ನನಗೂ 60 ವರ್ಷ ಸಂಬಂಧ ಇದೆ. ನಾನೂ 5 ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕಬಿನಿ, ಕೆಆರ್‌ಎಸ್ ಮತ್ತು ಹಾರಂಗಿಯಲ್ಲಿ ನೀರಿಲ್ಲ. ಈ ಬಗ್ಗೆ ಪಾರ್ಲಿಮೆಂಟ್ ಸದಸ್ಯರು ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಊಟಿ, ಹೊಸುರು ನಮ್ಮದು: ವಾಟಾಳ್​ ನಾಗರಾಜ್

ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷದವರು ಓಡಾಡಿದರು. ಈ ಬಗ್ಗೆ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಬೇಕು. ಸರ್ವ ಪಕ್ಷ ನಿಯೋಗ ಹೋಗಿ ಪ್ರಧಾನಿಯವರನ್ನು ಭೇಟಿ ಆಗಬೇಕು. ತುರ್ತು ಶಾಸನ ಸಭೆಯನ್ನ ಸಿಎಂ ಕರೆಯಬೇಕು. ನಾಳೆ ತಮಿಳುನಾಡಿನ ಹೊಸುರಿಗೆ ಹೋಗುತ್ತೇವೆ. ಬೆಳಿಗ್ಗೆ 11 ಗಂಟೆಗೆ ಹೊಸುರು ಪುರಸಭೆ ಮುಂದೆ ಭಾರಿ ಪ್ರತಿಭಟನೆ ಮಾಡುತ್ತೇವೆ. ಊಟಿ, ಹೊಸುರು ನಮ್ಮದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Tue, 17 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!