AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ
ನೀರಿಗಾಗಿ ಪರದಾಟ
TV9 Web
| Edited By: ವಿವೇಕ ಬಿರಾದಾರ|

Updated on:Sep 22, 2023 | 8:26 AM

Share

ಬೆಂಗಳೂರು ಸೆ.22: ಕಾವೇರಿ ನದಿ (Cauvery water Dispute) ನೀರು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಾವೇರಿ ಜಲಾಶಯನ ಪ್ರದೇಶ ಹಾಗೂ ಬೆಂಗಳೂರಿಗರನ್ನು (Bengaluru) ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ನಗರದ ಬೋರ್​​​ವೆಲ್​​ಗಳಲ್ಲಿ ನೀರು ಬರುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು ಹದಿನೈದು ದಿನವಾದರೂ ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯಲು, ಬಳಸಲು ನೀರಿಲ್ಲದೆ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಆನೇಕಲ್ ಕ್ಷೇತ್ರದ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಳಪಡುವ ಬಿಬಿಎಂಪಿಯ ಹೊಸ ವಾರ್ಡ್​ ​ಕೂಡ್ಲು ವಿಲೇಜ್​​ನಲ್ಲಿ ಕುಡಿಯಲು ನೀರು ಬರುತ್ತಿಲ್ಲ. ಈ ಕೂಡ್ಲು ವಾರ್ಡ್​​​ನಲ್ಲಿ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಮನೆ ಬಳಕೆಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಕೂಡ ಶುದ್ಧವಾಗಿ ಇರುವುದಿಲ್ಲ. ಮನೆ ಮಾಲೀಕರಿಗೆ ಮಾತ್ರ ಟ್ಯಾಂಕರ್​ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆ ಮನೆಯವರು ದುಡ್ಡು ಕೊಟ್ಟು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳಬೇಕು.

ಇದನ್ನೂ ಓದಿ: ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ. ಕಳೆದ ವರ್ಷ ನೆಪಮಾತ್ರಕ್ಕೆ ಎರಡು ಬೋರ್​​ವೆಲ್​ಗಳನ್ನು ಕೊರೆಯಲಾಯಿತು. ಆದರೆ ಆ ಬೋರ್ ವೆಲ್​ಗಳಲ್ಲಿ ಕೆಲವು ದಿನಗಳು ಮಾತ್ರ ನೀರು ಬಂತು. ಆದರೆ ಈಗ ನೀರು ಬರುತ್ತಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಟ್ಯಾಂಕರ್ ಮಾಲೀಕರು ಒಂದು ವಾಟರ್ ಟ್ಯಾಂಕ್ ನೀರಿಗೆ ಸಾವಿರದಿಂದ ಒಂದೂವರೆ, ಎರಡು ಸಾವಿರ ರುಪಾಯಿವರೆಗೆ ತೆಗೆದುಕೊಳ್ಳುತ್ತಿದ್ದಾರಂತೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮತ್ತು ವಾಟರ್ ಟ್ಯಾಂಕರ್​​ ಮಾಲಿಕನೊಂದಿಗೆ ಮಾಫಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Fri, 22 September 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ