Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ
ನೀರಿಗಾಗಿ ಪರದಾಟ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 22, 2023 | 8:26 AM

ಬೆಂಗಳೂರು ಸೆ.22: ಕಾವೇರಿ ನದಿ (Cauvery water Dispute) ನೀರು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಾವೇರಿ ಜಲಾಶಯನ ಪ್ರದೇಶ ಹಾಗೂ ಬೆಂಗಳೂರಿಗರನ್ನು (Bengaluru) ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ನಗರದ ಬೋರ್​​​ವೆಲ್​​ಗಳಲ್ಲಿ ನೀರು ಬರುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು ಹದಿನೈದು ದಿನವಾದರೂ ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯಲು, ಬಳಸಲು ನೀರಿಲ್ಲದೆ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಆನೇಕಲ್ ಕ್ಷೇತ್ರದ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಳಪಡುವ ಬಿಬಿಎಂಪಿಯ ಹೊಸ ವಾರ್ಡ್​ ​ಕೂಡ್ಲು ವಿಲೇಜ್​​ನಲ್ಲಿ ಕುಡಿಯಲು ನೀರು ಬರುತ್ತಿಲ್ಲ. ಈ ಕೂಡ್ಲು ವಾರ್ಡ್​​​ನಲ್ಲಿ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಮನೆ ಬಳಕೆಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಕೂಡ ಶುದ್ಧವಾಗಿ ಇರುವುದಿಲ್ಲ. ಮನೆ ಮಾಲೀಕರಿಗೆ ಮಾತ್ರ ಟ್ಯಾಂಕರ್​ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆ ಮನೆಯವರು ದುಡ್ಡು ಕೊಟ್ಟು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳಬೇಕು.

ಇದನ್ನೂ ಓದಿ: ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ. ಕಳೆದ ವರ್ಷ ನೆಪಮಾತ್ರಕ್ಕೆ ಎರಡು ಬೋರ್​​ವೆಲ್​ಗಳನ್ನು ಕೊರೆಯಲಾಯಿತು. ಆದರೆ ಆ ಬೋರ್ ವೆಲ್​ಗಳಲ್ಲಿ ಕೆಲವು ದಿನಗಳು ಮಾತ್ರ ನೀರು ಬಂತು. ಆದರೆ ಈಗ ನೀರು ಬರುತ್ತಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಟ್ಯಾಂಕರ್ ಮಾಲೀಕರು ಒಂದು ವಾಟರ್ ಟ್ಯಾಂಕ್ ನೀರಿಗೆ ಸಾವಿರದಿಂದ ಒಂದೂವರೆ, ಎರಡು ಸಾವಿರ ರುಪಾಯಿವರೆಗೆ ತೆಗೆದುಕೊಳ್ಳುತ್ತಿದ್ದಾರಂತೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮತ್ತು ವಾಟರ್ ಟ್ಯಾಂಕರ್​​ ಮಾಲಿಕನೊಂದಿಗೆ ಮಾಫಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Fri, 22 September 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ