ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ
ನೀರಿಗಾಗಿ ಪರದಾಟ
Follow us
| Updated By: ವಿವೇಕ ಬಿರಾದಾರ

Updated on:Sep 22, 2023 | 8:26 AM

ಬೆಂಗಳೂರು ಸೆ.22: ಕಾವೇರಿ ನದಿ (Cauvery water Dispute) ನೀರು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಾವೇರಿ ಜಲಾಶಯನ ಪ್ರದೇಶ ಹಾಗೂ ಬೆಂಗಳೂರಿಗರನ್ನು (Bengaluru) ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ನಗರದ ಬೋರ್​​​ವೆಲ್​​ಗಳಲ್ಲಿ ನೀರು ಬರುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು ಹದಿನೈದು ದಿನವಾದರೂ ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯಲು, ಬಳಸಲು ನೀರಿಲ್ಲದೆ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಆನೇಕಲ್ ಕ್ಷೇತ್ರದ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಳಪಡುವ ಬಿಬಿಎಂಪಿಯ ಹೊಸ ವಾರ್ಡ್​ ​ಕೂಡ್ಲು ವಿಲೇಜ್​​ನಲ್ಲಿ ಕುಡಿಯಲು ನೀರು ಬರುತ್ತಿಲ್ಲ. ಈ ಕೂಡ್ಲು ವಾರ್ಡ್​​​ನಲ್ಲಿ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಮನೆ ಬಳಕೆಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಕೂಡ ಶುದ್ಧವಾಗಿ ಇರುವುದಿಲ್ಲ. ಮನೆ ಮಾಲೀಕರಿಗೆ ಮಾತ್ರ ಟ್ಯಾಂಕರ್​ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆ ಮನೆಯವರು ದುಡ್ಡು ಕೊಟ್ಟು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳಬೇಕು.

ಇದನ್ನೂ ಓದಿ: ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ. ಕಳೆದ ವರ್ಷ ನೆಪಮಾತ್ರಕ್ಕೆ ಎರಡು ಬೋರ್​​ವೆಲ್​ಗಳನ್ನು ಕೊರೆಯಲಾಯಿತು. ಆದರೆ ಆ ಬೋರ್ ವೆಲ್​ಗಳಲ್ಲಿ ಕೆಲವು ದಿನಗಳು ಮಾತ್ರ ನೀರು ಬಂತು. ಆದರೆ ಈಗ ನೀರು ಬರುತ್ತಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಟ್ಯಾಂಕರ್ ಮಾಲೀಕರು ಒಂದು ವಾಟರ್ ಟ್ಯಾಂಕ್ ನೀರಿಗೆ ಸಾವಿರದಿಂದ ಒಂದೂವರೆ, ಎರಡು ಸಾವಿರ ರುಪಾಯಿವರೆಗೆ ತೆಗೆದುಕೊಳ್ಳುತ್ತಿದ್ದಾರಂತೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮತ್ತು ವಾಟರ್ ಟ್ಯಾಂಕರ್​​ ಮಾಲಿಕನೊಂದಿಗೆ ಮಾಫಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Fri, 22 September 23

ತಾಜಾ ಸುದ್ದಿ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ