AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ
ನೀರಿಗಾಗಿ ಪರದಾಟ
TV9 Web
| Edited By: |

Updated on:Sep 22, 2023 | 8:26 AM

Share

ಬೆಂಗಳೂರು ಸೆ.22: ಕಾವೇರಿ ನದಿ (Cauvery water Dispute) ನೀರು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಾವೇರಿ ಜಲಾಶಯನ ಪ್ರದೇಶ ಹಾಗೂ ಬೆಂಗಳೂರಿಗರನ್ನು (Bengaluru) ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ನಗರದ ಬೋರ್​​​ವೆಲ್​​ಗಳಲ್ಲಿ ನೀರು ಬರುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು ಹದಿನೈದು ದಿನವಾದರೂ ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯಲು, ಬಳಸಲು ನೀರಿಲ್ಲದೆ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಆನೇಕಲ್ ಕ್ಷೇತ್ರದ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಳಪಡುವ ಬಿಬಿಎಂಪಿಯ ಹೊಸ ವಾರ್ಡ್​ ​ಕೂಡ್ಲು ವಿಲೇಜ್​​ನಲ್ಲಿ ಕುಡಿಯಲು ನೀರು ಬರುತ್ತಿಲ್ಲ. ಈ ಕೂಡ್ಲು ವಾರ್ಡ್​​​ನಲ್ಲಿ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಮನೆ ಬಳಕೆಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಕೂಡ ಶುದ್ಧವಾಗಿ ಇರುವುದಿಲ್ಲ. ಮನೆ ಮಾಲೀಕರಿಗೆ ಮಾತ್ರ ಟ್ಯಾಂಕರ್​ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆ ಮನೆಯವರು ದುಡ್ಡು ಕೊಟ್ಟು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳಬೇಕು.

ಇದನ್ನೂ ಓದಿ: ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ. ಕಳೆದ ವರ್ಷ ನೆಪಮಾತ್ರಕ್ಕೆ ಎರಡು ಬೋರ್​​ವೆಲ್​ಗಳನ್ನು ಕೊರೆಯಲಾಯಿತು. ಆದರೆ ಆ ಬೋರ್ ವೆಲ್​ಗಳಲ್ಲಿ ಕೆಲವು ದಿನಗಳು ಮಾತ್ರ ನೀರು ಬಂತು. ಆದರೆ ಈಗ ನೀರು ಬರುತ್ತಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಟ್ಯಾಂಕರ್ ಮಾಲೀಕರು ಒಂದು ವಾಟರ್ ಟ್ಯಾಂಕ್ ನೀರಿಗೆ ಸಾವಿರದಿಂದ ಒಂದೂವರೆ, ಎರಡು ಸಾವಿರ ರುಪಾಯಿವರೆಗೆ ತೆಗೆದುಕೊಳ್ಳುತ್ತಿದ್ದಾರಂತೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮತ್ತು ವಾಟರ್ ಟ್ಯಾಂಕರ್​​ ಮಾಲಿಕನೊಂದಿಗೆ ಮಾಫಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Fri, 22 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ