AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ನಗರದಲ್ಲಿ ಹೈಅಲರ್ಟ್, ಹೆಚ್ಚುವರಿ ಪೊಲೀಸ್ ನಿಯೋಜನೆ

ಬೆಂಗಳೂರಿನಲ್ಲೂ ಕಾವೇರಿ ಹೋರಾಟ ತೀವ್ರಗೊಳ್ಳುತ್ತಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಇದು ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆದಿದೆ. ಹೀಗಾಗಿ ಬೆಂಗಳೂರು ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೈಅಲರ್ಟ್ ಮಾಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲು ಬೆಂಗಳೂರು ಪೊಲೀಸ್​​ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ನಗರದಲ್ಲಿ ಹೈಅಲರ್ಟ್, ಹೆಚ್ಚುವರಿ ಪೊಲೀಸ್ ನಿಯೋಜನೆ
ಸಾಂದರ್ಭಿಕ ಚಿತ್ರ
Jagadisha B
| Edited By: ಆಯೇಷಾ ಬಾನು|

Updated on: Sep 23, 2023 | 9:41 AM

Share

ಬೆಂಗಳೂರು, ಸೆ.23: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ(Cauvery Water Dispute) ಸುಪ್ರೀಂ ಕೋರ್ಟ್ ಕೊಟ್ಟ ಆದೇಶ ಕರುನಾಡಲ್ಲಿ ಕಿಚ್ಚು ಹತ್ತುವಂತೆ ಮಾಡಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ರೋಡಿಗಿಳಿಯುತ್ತಿವೆ. ಕಾವೇರಿಗಾಗಿ ಮಂಡ್ಯ ನಗರ, ಮದ್ದೂರು ಬಂದ್‌ ಮಾಡಲಾಗಿದೆ. ಅತ್ತಿಬೆಲೆ ಗಡಿ ಬಂದ್‌ ಆಗಿದೆ. ಇತ್ತ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ(Protest) ನಡೆಸುತ್ತಿದ್ದು ಬೆಂಗಳೂರು ಅಥವಾ ಕರ್ನಾಟಕ ಬಂದ್​ಗೆ ಕರೆ ನೀಡಲು ಮುಂದಾಗಿವೆ. ಕರ್ನಾಟಕ ರಕ್ಷಣಾ ‌ವೇದಿಕೆ, ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಸೇರಿದಂತೆ ಅನೇಕ ಸಂಘಟನೆಗಳು ಇಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿವೆ. ಹೀಗಾಗಿ ಬೆಂಗಳೂರು ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೈಅಲರ್ಟ್​ ಘೋಷಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆಗೆ ಸೂಚಿಸಿಲಾಗಿದೆ.

ಬೆಂಗಳೂರಿನಲ್ಲೂ ಕಾವೇರಿ ಹೋರಾಟ ತೀವ್ರಗೊಳ್ಳುತ್ತಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಇದು ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆದಿದೆ. ಹೀಗಾಗಿ ಬೆಂಗಳೂರು ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೈಅಲರ್ಟ್ ಮಾಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲು ಬೆಂಗಳೂರು ಪೊಲೀಸ್​​ ಕಮಿಷನರ್ ಬಿ.ದಯಾನಂದ್ ಅವರು ಆಯಾ ವಲಯ ಹೆಚ್ಚುವರಿ ಆಯುಕ್ತರು, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ತಮಿಳುನಾಡು ಕಡೆ ಹೊರಡುವ ಬಸ್​​ಗಳು, ಬಸ್ ನಿಲ್ದಾಣಗಳ ಮೇಲೆ ನಿಗಾ ಇಡುವಂತೆ ತಿಳಿಸಿದ್ದಾರೆ. ತಮಿಳು ನಿವಾಸಿಗಳು ವಾಸಿಸುತ್ತಿರುವ ಕಡೆ ನಿಗಾ ವಹಿಸಿ ಗಸ್ತು ಮಾಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕಾವೇರಿ ಕಿಚ್ಚಿಗೆ ಕರುನಾಡು ಬಂದ್ ಸಾಧ್ಯತೆ, ಬೆಂಗಳೂರಿನಲ್ಲಿಂದು ಸಾಲು ಸಾಲು ಪ್ರತಿಭಟನೆ

2016ರಲ್ಲಿ ಕಾವೇರಿ ಗಲಾಟೆ ನಡೆದ ಏರಿಯಾಗಳಲ್ಲಿ ತೀವ್ರ ನಿಗಾ ಇಡಲು ಹಾಘೂ ನಗರದ ಪಶ್ಚಿಮ, ಉತ್ತರ ವಿಭಾಗದಲ್ಲಿ ತೀವ್ರ ನಿಗಾವಹಿಸಲು ಪೊಲೀಸ್​​ ಕಮಿಷನರ್ ಬಿ.ದಯಾನಂದ್ ಅವರು ಸೂಚನೆ ನೀಡಿದ್ದಾರೆ. ಮೈಸೂರು ರಸ್ತೆಯ ಏರಿಯಾಗಳು, ಹೊಸೂರು ರಸ್ತೆಯ ಏರಿಯಾ, ರಾಜರಾಜೇಶ್ವರಿ ನಗರ, ಬ್ಯಾಟರಾಯನಪುರ, ಸ್ಯಾಟ್​​ಲೈಟ್ ಆಸುಪಾಸು, ಕೆಆರ್ ಮಾರ್ಕೆಟ್ ಸೇರಿದಂತೆ ಪ್ರಮುಖ ಏರಿಯಾಗಳಲ್ಲಿ ನಿಗಾ ಇಡಲು ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏರಿಯಾಗಳಲ್ಲಿ ಗಸ್ತು ನಡೆಸಲು ಸೂಚನೆ ಕೊಡಲಾಗಿದೆ. ಆಯಾ ಡಿಸಿಪಿಗಳೇ ತಮ್ಮ ವ್ಯಾಪ್ತಿಯಲ್ಲಿ ಬಂದೋಬಸ್ತ್​ ಮಾಡಬೇಕು. ಪ್ರತಿಭಟನೆ, ಹೋರಾಟಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮ ಜರುಗಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್​​ ಬಿ.ದಯಾನಂದ್​ ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ