Bengaluru Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ, ಜನರಿಗೆ ಮತ್ತೊಂದು ಹೊರೆ

ಬೆಂಗಳೂರು ನೀರಿನ ದರ ಏರಿಕೆ: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡುವ ಬಗ್ಗೆ ಕಳೆದ ಒಂದು ವರ್ಷದಿಂದ ಆಗಾಗ ಚರ್ಚೆ ನಡೆಯುತ್ತಿತ್ತು. ನೀರಿನ ದರ ಹೆಚ್ಚಳ ಅನಿವಾರ್ಯ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕೆಲವು ಬಾರಿ ಹೇಳಿದ್ದರು. ಇದೀಗ ಜಲಮಂಡಳಿ ಅಧ್ಯಕ್ಷರು ನೀರಿನ ದರ ಏರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.

Bengaluru Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ, ಜನರಿಗೆ ಮತ್ತೊಂದು ಹೊರೆ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: Apr 09, 2025 | 2:02 PM

ಬೆಂಗಳೂರು, ಏಪ್ರಿಲ್ 9: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ (Bangalore Water Price Hike) ಮಾಡುವ ವಿಚಾರವಾಗಿ ಬೆಂಗಳೂರು ಜಲ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ (Ram Prasath Manohar) ಮಾಹಿತಿ ನೀಡಿದ್ದು, ಡೊಮೆಸ್ಟಿಕ್ ಕನೆಕ್ಷನ್​ಗೆ ಗರಿಷ್ಠ ಲೀಟರ್​ಗೆ ಒಂದು ಪೈಸೆ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ. ಇದರಿಂದಾಗಿ, ಒಟ್ಟಾರೆಯಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗುವ ಸಾಧ್ಯತೆ ಇದೆ. ನೀರು ಬಳಕೆಯ ಆಧಾರದ ಮೇಲೆ ಸ್ಲ್ಯಾಬ್​​ಗಳನ್ನು ನಿಗದಿಪಡಿಸಲಾಗಿದ್ದು, ಎಷ್ಟು ಬಳಕೆಗೆ ಎಷ್ಟು ದರ ಏರಿಕೆಯಾಲಿದೆ ಎಂಬ ಬಗ್ಗೆ ರಾಮ್ ಪ್ರಸಾತ್ ಮನೋಹರ್ ವಿವರಗಳನ್ನು ನೀಡಿದ್ದಾರೆ.

ನೀರಿನ ದರ ಏರಿಕೆ ವಿವರ ಹೀಗಿದೆ…

  • ಡೊಮೆಸ್ಟಿಕ್ ಕನೆಕ್ಷನ್​ಗೆ ಗರಿಷ್ಠ ಲೀಟರ್​ಗೆ ಒಂದು ಪೈಸೆ ಹೆಚ್ಚಳವಾಗಲಿದೆ.
  • 0-8 ಸಾವಿರದೊಳಗೆ ಸ್ಲ್ಯಾಬ್​ಗೆ ಲೀಟರ್​ಗೆ 0.15 ಪೈಸೆ ಹೆಚ್ಚಳವಾಗಲಿದೆ.
  • 8-25 ಸಾವಿರದೊಳಗಿನ ಸ್ಲ್ಯಾಬ್​ಗೆ ಲೀಟರ್​ಗೆ 0.40 ಪೈಸೆ ಹೆಚ್ಚಳವಾಗಲಿದೆ.
  • 25 ಸಾವಿರ ಲೀಟರ್​ಗಿಂತ ಹೆಚ್ಚು ಬಳಕೆ ಮಾಡಿದ್ರೆ 0.80 ಪೈಸೆ ಏರಿಕೆಯಾಗಲಿದೆ.
  • 50 ಸಾವಿರದಿಂದ 1 ಲಕ್ಷ ಲೀಟರ್ ನೀರು ಬಳಕೆಗೆ 1 ಪೈಸೆ ಹೆಚ್ಚಳವಾಗಲಿದೆ.

ನೀರಿನ ದರ ಏರಿಕೆ ಏಪ್ರಿಲ್​ನಿಂದಲೇ ಅನ್ವಯ

ಪ್ರತಿ ವರ್ಷ ಏಪ್ರಿಲ್ 1ರಿಂದ ಶೇಕಡಾ 3ರಷ್ಟು ನೀರಿನ ದರ ಹೆಚ್ಚಳವಾಗಲಿದೆ. ಇದೀಗ ಸದ್ಯದ ತೀರ್ಮಾನದಿಂದಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗಬಹುದು. ವಾಣಿಜ್ಯ ಬಳಕೆದಾರರಿಗೆ ಪ್ರತಿ ತಿಂಗಳು 50-60 ರೂ. ಹೊರೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಜಲ ಮಂಡಳಿ 2014 ರಿಂದ ಈವರೆಗೆ ನಗರದಲ್ಲಿ ನೀರು ಪೂರೈಕೆ ದರ ಹೆಚ್ಚಳ ಮಾಡಿಲ್ಲ. ಮಂಡಳಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದೆ. ಹೀಗಾಗಿ ಲೀಟರಿಗೆ ಒಂದು ಪೈಸೆಯಷ್ಟಾದರೂ ದರ ಏರಿಕೆ ಮಾಡಲೇಬೇಕಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಸದ್ಯ ವಸತಿ ಕಟ್ಟಡಗಳಿಗೆ ಪೂರೈಕೆ ಮಾಡುವ ನೀರಿಗೆ ಒಟ್ಟು ನಾಲ್ಕು ಸ್ಲ್ಯಾಬ್​ಗಳಲ್ಲಿ ದರ ನಿಗದಿಪಡಿಸಲಾಗಿದೆ. ಇದೀಗ ಗೃಹಗಳಕೆಯ ನೀರಿನ ದರ ಹೆಚ್ಚಳದ ಬಗ್ಗೆಯೂ ನೆಲಮಂಡಳಿ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ: ಶೀಘ್ರ ಹೊಸ ಮಾನದಂಡ
ರಜೆಯೆಂದು ಮನೆಗೆ ಬೀಗ ಹಾಕಿ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಸಲಹೆ ಗಮನಿಸಿ
ಇಂದು, ನಾಳೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ: ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಈ ಸಲಹೆ ಗಮನಿಸಿ

ಇದರೊಂದಿಗೆ, ಈಗಾಗಲೇ ಹಾಲು, ಮೊಸರು, ಕಾಫಿ ಇನ್ನಿತರ ಅಗತ್ಯ ವಸ್ತುಗಳ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಸಾರ್ವಜನಿಕರಿಗೆ ಇನ್ನಷ್ಟು ಹೊರೆ ಬೀಳಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 9 April 25