AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಮಾಜಿ ಮಂಡ್ಯ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಎಲ್​ಆರ್ ಶಿವರಾಮೇಗೌಡ ಅವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಸಿಕೊಂಡಿದೆ. ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಶಿವರಾಮೇಗೌಡ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಎಫ್​ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ
ಎಲ್​ಆರ್ ಶಿವರಾಮೇಗೌಡ
Jagadish PB
| Edited By: |

Updated on:Dec 04, 2023 | 8:19 AM

Share

ಬೆಂಗಳೂರು, (ಡಿಸೆಂಬರ್ 04): ನಕಲಿ ದಾಖಲೆಗಳನ್ಉ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ (Mandya Ex MP LR shivaramegowda )ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ (CBI) ಎಫ್​ಐಆರ್ ದಾಖಲಿಸಿದೆ.

ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್​ಡಿ ಮೋದಿ ಸಲ್ಲಿಸಿರುವ ದೂರಿನ ಮೇರೆಗೆ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ , ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್​ಎಸ್ ಭವ್ಯಾ ಗೌಡ ಹಾಗೂ ಬ್ಯಾಂಕ್​ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನವೆಂಬರ್ 7ರಂದು ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೂರು ಸಲ್ಲಿಸಿದ್ದು, ನವೆಂಬರ್ 21 ರಂದು ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ, ಐಪಿಸಿ 120b, 420, 468, 471 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ದಾಖಲಿಸಿಕೊಂಡಿದ್ದು, ಇನ್ಸ್​ಪೆಕ್ಟರ್​ ಸಿದ್ದಪ್ಪ ಡಿ.ಜಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:16 am, Mon, 4 December 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್