AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಮಾಜಿ ಮಂಡ್ಯ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಎಲ್​ಆರ್ ಶಿವರಾಮೇಗೌಡ ಅವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಸಿಕೊಂಡಿದೆ. ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಶಿವರಾಮೇಗೌಡ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಎಫ್​ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ
ಎಲ್​ಆರ್ ಶಿವರಾಮೇಗೌಡ
Jagadish PB
| Updated By: ರಮೇಶ್ ಬಿ. ಜವಳಗೇರಾ|

Updated on:Dec 04, 2023 | 8:19 AM

Share

ಬೆಂಗಳೂರು, (ಡಿಸೆಂಬರ್ 04): ನಕಲಿ ದಾಖಲೆಗಳನ್ಉ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ (Mandya Ex MP LR shivaramegowda )ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ (CBI) ಎಫ್​ಐಆರ್ ದಾಖಲಿಸಿದೆ.

ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್​ಡಿ ಮೋದಿ ಸಲ್ಲಿಸಿರುವ ದೂರಿನ ಮೇರೆಗೆ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ , ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್​ಎಸ್ ಭವ್ಯಾ ಗೌಡ ಹಾಗೂ ಬ್ಯಾಂಕ್​ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನವೆಂಬರ್ 7ರಂದು ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೂರು ಸಲ್ಲಿಸಿದ್ದು, ನವೆಂಬರ್ 21 ರಂದು ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ, ಐಪಿಸಿ 120b, 420, 468, 471 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ದಾಖಲಿಸಿಕೊಂಡಿದ್ದು, ಇನ್ಸ್​ಪೆಕ್ಟರ್​ ಸಿದ್ದಪ್ಪ ಡಿ.ಜಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:16 am, Mon, 4 December 23

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್