AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಮಾಜಿ ಮಂಡ್ಯ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಎಲ್​ಆರ್ ಶಿವರಾಮೇಗೌಡ ಅವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಸಿಕೊಂಡಿದೆ. ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಶಿವರಾಮೇಗೌಡ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಎಫ್​ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ
ಎಲ್​ಆರ್ ಶಿವರಾಮೇಗೌಡ
Jagadish PB
| Edited By: |

Updated on:Dec 04, 2023 | 8:19 AM

Share

ಬೆಂಗಳೂರು, (ಡಿಸೆಂಬರ್ 04): ನಕಲಿ ದಾಖಲೆಗಳನ್ಉ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ (Mandya Ex MP LR shivaramegowda )ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ (CBI) ಎಫ್​ಐಆರ್ ದಾಖಲಿಸಿದೆ.

ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್​ಡಿ ಮೋದಿ ಸಲ್ಲಿಸಿರುವ ದೂರಿನ ಮೇರೆಗೆ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ , ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್​ಎಸ್ ಭವ್ಯಾ ಗೌಡ ಹಾಗೂ ಬ್ಯಾಂಕ್​ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನವೆಂಬರ್ 7ರಂದು ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೂರು ಸಲ್ಲಿಸಿದ್ದು, ನವೆಂಬರ್ 21 ರಂದು ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ, ಐಪಿಸಿ 120b, 420, 468, 471 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ದಾಖಲಿಸಿಕೊಂಡಿದ್ದು, ಇನ್ಸ್​ಪೆಕ್ಟರ್​ ಸಿದ್ದಪ್ಪ ಡಿ.ಜಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:16 am, Mon, 4 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ