ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದುದು ಇಲ್ಲಿದೆ

ಬಸ್​ನಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳ ಅಳವಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದು, ಐದು ಸಾವಿರ ಬಸ್​ಗಳಿಗೆ ಅಳವಡಿಕೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಫ್ಯಾಕ್ಟ್ ಚೆಕ್ ಮಾಡಿದೆ.

ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದುದು ಇಲ್ಲಿದೆ
ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಟಿವಿ9ನಿಂದ ಫ್ಯಾಕ್ಟ್ ಚೆಕ್
Follow us
| Updated By: Rakesh Nayak Manchi

Updated on: Nov 30, 2023 | 2:13 PM

ಬೆಂಗಳೂರು, ನ.30: ಬಸ್​ನಲ್ಲಿ ಸರಗಳ್ಳತನ, ಲೈಂಗಿಕ ಕಿರುಕುಳದಂತಹ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ (BMTC) ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳ ಅಳವಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದು, ಐದು ಸಾವಿರ ಬಸ್​ಗಳಿಗೆ ಅಳವಡಿಕೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ.

ಕೇಂದ್ರ ಸರ್ಕಾರದ ನಿರ್ಭಯ ಯೋಜನೆ ಅಡಿಯಲ್ಲಿ ಸಿಸಿ ಟಿವಿ ಮತ್ತು ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಿಜವಾಗಿಯೂ ಈ ಪ್ಯಾನಿಕ್ ಬಟನ್ ವರ್ಕ್ ಮಾಡುತ್ತದೆಯೇ? ಬಟನ್ ಪ್ರೆಸ್ ಮಾಡಿದರೆ ಸೈರನ್ ಆಗುತ್ತಾ? ಕಂಟ್ರೋಲ್‌ ರೂಮ್​ನಿಂದ ಡ್ರೈವರ್ ಕಂಡಕ್ಟರ್​ಗಳಿಗೆ ಕರೆ ಬರುತ್ತಾ? ಬಸ್​ನಲ್ಲಿರುವ ಬಟನ್ ಪ್ರೆಸ್ ಮಾಡಿದ ಮಹಿಳೆಯರ ವಿಡಿಯೋ ಕವರೇಜ್ ಆಗುತ್ತಾ ಎಂದು ಪರಿಶೀಲಿಸಲಾಯಿತು.

ಅದರಂತೆ, ಇನ್ನು ಮುಂದೆ ಬಿಎಂಟಿಸಿ ಬಸ್​ನಲ್ಲಿ ಮಹಿಳೆಯರು ಸೇಫ್ ಆಗಿ ಓಡಾಡಬಹುದು ಎಂದು ಮನವರಿಕೆಯಾಗಿದೆ. ಇಂದಿನಿಂದ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣ ಮಾಡುವ ಮಹಿಳೆಯರಿಗೆ ಫುಲ್ ಸೆಫ್ಟಿ ಸಿಗಲಿದೆ.

ಬಿಎಂಟಿಸಿ ಬಸ್​ನಲ್ಲಿರುವ ಪ್ಯಾನಿಕ್ ಬಟನ್ ಒತ್ತಿದರೆ ಸಿಸಿ ಟಿವಿ ಅಲರ್ಟ್ ಮತ್ತು ಸೈರನ್ ಆನ್ ಆಗುತ್ತದೆ. ಬಟನ್ ಪ್ರೆಸ್ ಆಗುತ್ತಿದ್ದಂತೆ ಬಿಎಂಟಿಯ ಕಂಟ್ರೋಲ್‌ ರೂಮ್​ಗೆ ಬಸ್​ನ ಸಂಪೂರ್ಣ ಮಾಹಿತಿ‌ ರವಾನೆಯಾಗಿದೆ. ಅಲ್ಲದೆ, ಕಂಡಕ್ಟರ್ ಮತ್ತು ಡ್ರೈವರ್​ಗೆ ಕಂಟ್ರೋಲ್ ರೂಮ್​ನಿಂದ ಕರೆ ಬರುತ್ತದೆ.

ಇದನ್ನೂ ಓದಿ: ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ

ಪ್ರಯಾಣಿಕರು ನಿಮ್ಮ ಬಸ್​ನಲ್ಲಿರುವ ಪ್ಯಾನಿಕ್ ಬಟನ್ ಪ್ರೆಸ್ ಮಾಡಿದ್ದಾರೆ ಆ ಪ್ರಯಾಣಿಕರಿಗೆ ಸಮಸ್ಯೆ ಏನಾಗಿದೆ ಎಂದು ಕೇಳಲಾಗುತ್ತದೆ. ನಂತರ ಆಕೆಯ ರಕ್ಷಣೆಗೆ ಕಂಡಕ್ಟರ್ ಮತ್ತು ಡ್ರೈವರ್ ದಾವಿಸುತ್ತಾರೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆ ಬಸ್ ಅನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ. ಯಾರಾದರೂ ಮಹಿಳೆಯರಿಗೆ ಕಿರುಕುಳ ನೀಡಿದ್ದ ಬಗ್ಗೆ ಮಾಹಿತಿ ನೀಡಿದರೆ ಬಸ್ ಅನ್ನು ಹತ್ತಿರದ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗುತ್ತದೆ.

ಬಿಎಂಟಿಸಿ ಬಸ್​ನಲ್ಲಿ ಮಹಿಳೆಯರಿಗೆ ಆಗುತ್ತಿದ್ದ ಕಿರುಕುಳದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಪರಿಣಾಮ ಕಿರುಕುಳ ನೀಡಿದ್ದ ಕಂಡಕ್ಟರ್ ಕೆಂಪಣ್ಣ ಎಂಬವರನ್ನು ಅಮಾನತು ಮಾಡಲಾಗಿದೆ. ಇದೇ ಕಾರಣಕ್ಕೆ ಟಿವಿ9ಗೆ ಮಹಿಳಾ ಪ್ರಯಾಣಿಕರು ಧನ್ಯವಾದ ತಿಳಿಸಿದ್ದಾರೆ.

ಪ್ರಕರಣದ ನಂತರ ಬಿಎಂಟಿಸಿ ನಮ್ಮ ಬಿಎಂಟಿಸಿ ಆ್ಯಪ್ ಬಿಡುಗಡೆ ಮಾಡಿದ್ದು, ಆ್ಯಪ್​ನಲ್ಲಿ ಸ್ಪೆಷಲ್ ಫೀಚರ್ ಲಾಂಚ್ ಮಾಡಲಾಗಿದೆ. ಎಸ್ಓಎಸ್ ಬಟನ್ ಪ್ರೆಸ್ ಮಾಡಿದರೆ ಬಿಎಂಟಿಸಿ ಕಾಲ್ ಸೆಂಟರ್​ನಿಂದ ಪ್ರಯಾಣಿಕರ ಮೊಬೈಲ್ ನಂಬರ್​ಗೆ ಕರೆ ಬರುತ್ತದೆ. ಈ ವೇಳೆ ಸಮಸ್ಯೆ ಹೇಳಿಕೊಳ್ಳಬಹುದು. ನಂತರ ಸ್ಥಳಕ್ಕೆ ಪಿಂಕ್ ಮಹಿಳಾ ಸಾರಥಿ ವಾಹನವನ್ನು ಕಳಿಸಲಾಗುತ್ತದೆ.

ಪ್ರಯಾಣಿಕರು ಪ್ಲೇ ಸ್ಟೋರ್​ನಲ್ಲಿ ನಮ್ಮ ಬಿಎಂಟಿಸಿ ಆ್ಯಪ್ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸ್ಮಾರ್ಟ್ ಪೋನ್ ಇಲ್ಲದ ಪ್ರಯಾಣಿಕರು ಪ್ಯಾನಿಕ್ ಬಟನ್ ಪ್ರೆಸ್ ಮಾಡಬಹುದು. ಸ್ಮಾರ್ಟ್ ಫೋನ್ ಇರುವ ಪ್ರಯಾಣಿಕರು ಎಸ್ಓಎಸ್ ಬಟನ್ ಪ್ರೆಸ್ ಮಾಡಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ