AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದುದು ಇಲ್ಲಿದೆ

ಬಸ್​ನಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳ ಅಳವಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದು, ಐದು ಸಾವಿರ ಬಸ್​ಗಳಿಗೆ ಅಳವಡಿಕೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಫ್ಯಾಕ್ಟ್ ಚೆಕ್ ಮಾಡಿದೆ.

ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದುದು ಇಲ್ಲಿದೆ
ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಟಿವಿ9ನಿಂದ ಫ್ಯಾಕ್ಟ್ ಚೆಕ್
Kiran Surya
| Edited By: |

Updated on: Nov 30, 2023 | 2:13 PM

Share

ಬೆಂಗಳೂರು, ನ.30: ಬಸ್​ನಲ್ಲಿ ಸರಗಳ್ಳತನ, ಲೈಂಗಿಕ ಕಿರುಕುಳದಂತಹ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ (BMTC) ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳ ಅಳವಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದು, ಐದು ಸಾವಿರ ಬಸ್​ಗಳಿಗೆ ಅಳವಡಿಕೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ.

ಕೇಂದ್ರ ಸರ್ಕಾರದ ನಿರ್ಭಯ ಯೋಜನೆ ಅಡಿಯಲ್ಲಿ ಸಿಸಿ ಟಿವಿ ಮತ್ತು ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಿಜವಾಗಿಯೂ ಈ ಪ್ಯಾನಿಕ್ ಬಟನ್ ವರ್ಕ್ ಮಾಡುತ್ತದೆಯೇ? ಬಟನ್ ಪ್ರೆಸ್ ಮಾಡಿದರೆ ಸೈರನ್ ಆಗುತ್ತಾ? ಕಂಟ್ರೋಲ್‌ ರೂಮ್​ನಿಂದ ಡ್ರೈವರ್ ಕಂಡಕ್ಟರ್​ಗಳಿಗೆ ಕರೆ ಬರುತ್ತಾ? ಬಸ್​ನಲ್ಲಿರುವ ಬಟನ್ ಪ್ರೆಸ್ ಮಾಡಿದ ಮಹಿಳೆಯರ ವಿಡಿಯೋ ಕವರೇಜ್ ಆಗುತ್ತಾ ಎಂದು ಪರಿಶೀಲಿಸಲಾಯಿತು.

ಅದರಂತೆ, ಇನ್ನು ಮುಂದೆ ಬಿಎಂಟಿಸಿ ಬಸ್​ನಲ್ಲಿ ಮಹಿಳೆಯರು ಸೇಫ್ ಆಗಿ ಓಡಾಡಬಹುದು ಎಂದು ಮನವರಿಕೆಯಾಗಿದೆ. ಇಂದಿನಿಂದ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣ ಮಾಡುವ ಮಹಿಳೆಯರಿಗೆ ಫುಲ್ ಸೆಫ್ಟಿ ಸಿಗಲಿದೆ.

ಬಿಎಂಟಿಸಿ ಬಸ್​ನಲ್ಲಿರುವ ಪ್ಯಾನಿಕ್ ಬಟನ್ ಒತ್ತಿದರೆ ಸಿಸಿ ಟಿವಿ ಅಲರ್ಟ್ ಮತ್ತು ಸೈರನ್ ಆನ್ ಆಗುತ್ತದೆ. ಬಟನ್ ಪ್ರೆಸ್ ಆಗುತ್ತಿದ್ದಂತೆ ಬಿಎಂಟಿಯ ಕಂಟ್ರೋಲ್‌ ರೂಮ್​ಗೆ ಬಸ್​ನ ಸಂಪೂರ್ಣ ಮಾಹಿತಿ‌ ರವಾನೆಯಾಗಿದೆ. ಅಲ್ಲದೆ, ಕಂಡಕ್ಟರ್ ಮತ್ತು ಡ್ರೈವರ್​ಗೆ ಕಂಟ್ರೋಲ್ ರೂಮ್​ನಿಂದ ಕರೆ ಬರುತ್ತದೆ.

ಇದನ್ನೂ ಓದಿ: ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ

ಪ್ರಯಾಣಿಕರು ನಿಮ್ಮ ಬಸ್​ನಲ್ಲಿರುವ ಪ್ಯಾನಿಕ್ ಬಟನ್ ಪ್ರೆಸ್ ಮಾಡಿದ್ದಾರೆ ಆ ಪ್ರಯಾಣಿಕರಿಗೆ ಸಮಸ್ಯೆ ಏನಾಗಿದೆ ಎಂದು ಕೇಳಲಾಗುತ್ತದೆ. ನಂತರ ಆಕೆಯ ರಕ್ಷಣೆಗೆ ಕಂಡಕ್ಟರ್ ಮತ್ತು ಡ್ರೈವರ್ ದಾವಿಸುತ್ತಾರೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆ ಬಸ್ ಅನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ. ಯಾರಾದರೂ ಮಹಿಳೆಯರಿಗೆ ಕಿರುಕುಳ ನೀಡಿದ್ದ ಬಗ್ಗೆ ಮಾಹಿತಿ ನೀಡಿದರೆ ಬಸ್ ಅನ್ನು ಹತ್ತಿರದ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗುತ್ತದೆ.

ಬಿಎಂಟಿಸಿ ಬಸ್​ನಲ್ಲಿ ಮಹಿಳೆಯರಿಗೆ ಆಗುತ್ತಿದ್ದ ಕಿರುಕುಳದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಪರಿಣಾಮ ಕಿರುಕುಳ ನೀಡಿದ್ದ ಕಂಡಕ್ಟರ್ ಕೆಂಪಣ್ಣ ಎಂಬವರನ್ನು ಅಮಾನತು ಮಾಡಲಾಗಿದೆ. ಇದೇ ಕಾರಣಕ್ಕೆ ಟಿವಿ9ಗೆ ಮಹಿಳಾ ಪ್ರಯಾಣಿಕರು ಧನ್ಯವಾದ ತಿಳಿಸಿದ್ದಾರೆ.

ಪ್ರಕರಣದ ನಂತರ ಬಿಎಂಟಿಸಿ ನಮ್ಮ ಬಿಎಂಟಿಸಿ ಆ್ಯಪ್ ಬಿಡುಗಡೆ ಮಾಡಿದ್ದು, ಆ್ಯಪ್​ನಲ್ಲಿ ಸ್ಪೆಷಲ್ ಫೀಚರ್ ಲಾಂಚ್ ಮಾಡಲಾಗಿದೆ. ಎಸ್ಓಎಸ್ ಬಟನ್ ಪ್ರೆಸ್ ಮಾಡಿದರೆ ಬಿಎಂಟಿಸಿ ಕಾಲ್ ಸೆಂಟರ್​ನಿಂದ ಪ್ರಯಾಣಿಕರ ಮೊಬೈಲ್ ನಂಬರ್​ಗೆ ಕರೆ ಬರುತ್ತದೆ. ಈ ವೇಳೆ ಸಮಸ್ಯೆ ಹೇಳಿಕೊಳ್ಳಬಹುದು. ನಂತರ ಸ್ಥಳಕ್ಕೆ ಪಿಂಕ್ ಮಹಿಳಾ ಸಾರಥಿ ವಾಹನವನ್ನು ಕಳಿಸಲಾಗುತ್ತದೆ.

ಪ್ರಯಾಣಿಕರು ಪ್ಲೇ ಸ್ಟೋರ್​ನಲ್ಲಿ ನಮ್ಮ ಬಿಎಂಟಿಸಿ ಆ್ಯಪ್ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸ್ಮಾರ್ಟ್ ಪೋನ್ ಇಲ್ಲದ ಪ್ರಯಾಣಿಕರು ಪ್ಯಾನಿಕ್ ಬಟನ್ ಪ್ರೆಸ್ ಮಾಡಬಹುದು. ಸ್ಮಾರ್ಟ್ ಫೋನ್ ಇರುವ ಪ್ರಯಾಣಿಕರು ಎಸ್ಓಎಸ್ ಬಟನ್ ಪ್ರೆಸ್ ಮಾಡಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ