
ಬೆಂಗಳೂರು, (ಜುಲೈ 20): ಹುಡುಗಿ ಆಸೆ ತೋರಿಸಿ ವ್ಯಕ್ತಿಯನ್ನು ಸುಲಿಗೆ ಮಾಡಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಮನು, ಶಾಬು , ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಬಂಧಿತ ಆರೋಪಿಗಳು. ಇವರು ಆ್ಯಪ್ ಒಂದರಲ್ಲಿ ಹುಡುಗಿಯರು ಇದ್ದಾರೆ ಎಂದು ಮೊದಲು ಪೋಸ್ಟ್ ಮಾಡಿದ್ದರು. ಇದನ್ನು ನಂಬಿ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ ವ್ಯಕ್ತಿಯನ್ನು ಆರೋಪಿಗಳು ಸುಲಿಗೆ ಮಾಡಿದ್ದರು. ಹೌದು…ವ್ಯಕ್ತಿಯೊಬ್ಬರು ವೆಬ್ಸೈಟ್ನಲ್ಲಿ ನೋಡಿದ ಹುಡುಗಿಯನ್ನ ಭೇಟಿ ಮಾಡಲು ಆಸೆಯಿಂದ ಹೆಚ್.ಆರ್.ಬಿ.ಆರ್ ಲೇಔಟ್ಗೆ ಸಿಕ್ಕಿಬಿದ್ದಿದ್ದು, ಯುವತಿಯನ್ನು ಭೇಟಿ ಮಾಡುವ ಮೊದಲೇ ಸಂಚು ಮಾಡಿದ್ದ ಗ್ಯಾಂಗ್, ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಹೊಡೆದು ಬಡಿದು ಸುಲಿಗೆ ಮಾಡಿ ಪರಾರಿಯಾಗಿತ್ತು. ಬಳಿಕ ಸಿಸಿಬಿ ಕಾರ್ಯಚರಣೆ ನಡೆಸಿ ಸುಲಿಗೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಗ್ಯಾಂಗ್ ವೆಬ್ಸೈಟ್ವೊಂದರಲ್ಲಿ ಹುಡುಗಿ ಫೋಟೋ ವ್ಯಕ್ತಿಯನ್ನು ಮರಳು ಮಾಡಿತ್ತು. ಬಳಿಕ ಹುಡುಗಿ ಭೇಟಿಗೆ ಬಂದವನನ್ನು ಪ್ಲ್ಯಾನ್ ಮಾಡಿಯೇ ರನ್ನು ಚೇತನ್, ಮನು, ಶಾಬು, ಮಂಜುನಾಥ್, ಜಯಕುಮಾರ್ ಸೇರಿದಂತೆ 9 ಮಂದಿ ಆರೋಪಿಗಳು ಸೇರಿ ಕಿಡ್ನಾಪ್ ಮಾಡಿದ್ದರು. ತದನಂತರ ಸಂತ್ರಸ್ತನನ್ನು ನಗರದ ವಿವಿಧ ಭಾಗಗಳಲ್ಲಿ ಆಟೋದಲ್ಲಿ ಸುತ್ತಾಡಿಸಿ, ಜೀವ ಬೆದರಿಕೆ ಹಾಕಿ, ಹಲ್ಲೆ ಮಾಡಿ . ಕೊನೆಗೆ ಆತನ ಬಳಿಯಿದ್ದ ನಗದು, ಚಿನ್ನದ ಚೈನ್ ಹಾಗೂ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ದರೋಡೆ ಕುರಿತು ಸಿಸಿಬಿಗೆ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ, ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ WPW ವಿಭಾಗದ ಅಧಿಕಾರಿಗಳು, ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 11 ಜನ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 2 ಆಟೋಗಳು, 4 ದ್ವಿಚಕ್ರ ವಾಹನಗಳು, 13 ಮೊಬೈಲ್ ಫೋನ್ಗಳು ಹಾಗೂ ಸುಲಿಗೆ ಮಾಡಿದ್ದ ನಗದನ್ನು ವಶಪಡಿಸಿಕೊಳ್ಳಲಾಗಿದೆ.
Published On - 8:33 pm, Mon, 20 July 26