AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನೂರಾರು ಜನರಿಗೆ ಕೋರ್ಟ್ ಉದ್ಯೋಗ ವಂಚಿಸಿದ ಖತರ್ನಾಕ್ ದಂಪತಿ, ಜೇಸನ್ ಡಿಸೋಜಾ ಮತ್ತು ಲವೀನಾ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 25 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ನಿರುದ್ಯೋಗಿಗಳು ಮತ್ತು ಖಾಸಗಿ ಉದ್ಯೋಗಿಗಳೇ ಇವರ ಗುರಿಯಾಗಿದ್ದು, ದಂಪತಿ ಈ ಹಿಂದೆ ಕೂಡ ವಂಚನೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದಿದ್ದರು ಎಂದು ತಿಳಿದುಬಂದಿದೆ.

ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!
ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 23, 2026 | 12:04 PM

Share

ಬೆಂಗಳೂರು, ಮಾರ್ಚ್​ 23: ಕೋರ್ಟ್‌ಗಳಲ್ಲಿ ಸರ್ಕಾರಿ ಉದ್ಯೋಗ (Government Job) ಕೊಡಿಸುವುದಾಗಿ ಭರವಸೆ ನೀಡಿ ನೂರಾರು ಜನರನ್ನು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು  ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜೇಸನ್ ಡಿಸೋಜಾ ಮತ್ತು ಲವೀನಾ ದಂಪತಿ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿದ್ದು, ಸದ್ಯ ಸಿಸಿಬಿ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ನಿರುದ್ಯೋಗಿಗಳೇ ಟಾರ್ಗೆಟ್!

ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ದೊಡ್ಡ ಮಟ್ಟದ ಮೋಸದ ಜಾಲವನ್ನು ನಿರ್ಮಿಸಿದ್ದ ದಂಪತಿ, ಕೋರ್ಟ್‌ಗಳಲ್ಲಿ ಡಿ-ಗ್ರೂಪ್ ಉದ್ಯೋಗ ಕೊಡಿಸುವುದಾಗಿ ಹೇಳಿ ಒಬ್ಬೊಬ್ಬರಿಂದ 10ರಿಂದ 25 ಲಕ್ಷ ರೂಪಾಯಿಯವರೆಗೆ ಹಣ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ಹೆಳಿದ್ದಾರೆ.

ಏಜೆಂಟ್​ಗಳ ಮೂಲಕ ಕಾರ್ಯ

ನಂಬಿಕೆ ಮೂಡಿಸಲು ನ್ಯಾಯಾಧೀಶರ ಸಹಿಯನ್ನು ನಕಲಿ ಮಾಡಿ ನೇಮಕಾತಿ ಆದೇಶ ಪತ್ರಗಳನ್ನು ನೀಡುತ್ತಿದ್ದರು. ನಂತರ ಉದ್ಯೋಗದ ಬಗ್ಗೆ ವಿಚಾರಿಸಿದಾಗ ನಾಳೆ, ನಾಡಿದ್ದು ಎಂದು ಕಾಲಹರಣ ಮಾಡಿ, ಕೊನೆಗೆ ಕರೆಗಳಿಗೆ ಸ್ಪಂದಿಸದೇ ತಪ್ಪಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಏಜೆಂಟ್‌ಗಳ ಮೂಲಕ ಜನರನ್ನು ಬಲೆಗೆ ಬೀಳಿಸುತ್ತಿದ್ದ ಆರೋಪಿಗಳು ಕೆಲವರನ್ನು ಖಾಸಗಿ ಹೋಟೆಲ್‌ಗಳಿಗೆ ಕರೆಸಿ ದಾಖಲೆ ಪರಿಶೀಲನೆ ಹೆಸರಿನಲ್ಲಿ ನಕಲಿ ಆಫರ್ ಲೆಟರ್ ತೋರಿಸಿ ಮೋಸ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ಸಂತ್ರಸ್ತರು ದೂರು ನೀಡಿದ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

ಎರಡು ವರ್ಷಗಳ ಹಿಂದೆಯೇ ಜೈಲಿಗೆ ಹೋಗಿದ್ದ ದಂಪತಿ

ಆರೋಪಿಗಳು ಈ ಹಿಂದೆಯೂ 2024ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಬಂಧಿತರಾಗಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮತ್ತೆ ವಂಚನೆ ಮುಂದುವರಿಸಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದು, ಇನ್ನಷ್ಟು ಬಲಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್