AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ ಸಿಗರೇಟ್, ಇ ಲಿಕ್ವೀಡ್ ಮಾರಾಟ ಮಾಡ್ತಿದ್ದ ಕಂಪನಿ ಗೋಡೌನ್ ಮೇಲೆ CCB ದಾಳಿ; 25 ಲಕ್ಷ ರೂ. ಮೌಲ್ಯದ ನಿಷೇಧಿತ ಲಿಕ್ವೀಡ್ ವಶ

ನಿಷೇಧಿತ ಇ ಸಿಗರೇಟ್(e-cigarette), ಇ ಲಿಕ್ವೀಡ್(e-liquid) ಮಾರಾಟ ಮಾಡುತ್ತಿದ್ದ ಕುಂಬಾರಪೇಟೆಯ ಕಂಪನಿ ಗೋಡೋನ್ ಮೇಲೆ ಸಿಸಿಬಿ (CCB)ಮಹಿಳಾ ಸಂರಕ್ಷಣಾ ವಿಭಾಗದಿಂದ ದಾಳಿ ಮಾಡಲಾಗಿದೆ. ಈ ವೇಳೆ ಗೋಡೋನ್​ನಲ್ಲಿ ಸಂಗ್ರಹಿಸಿದ್ದ 1 ಕೋಟಿ 25 ಲಕ್ಷ ರೂ. ಮೌಲ್ಯದ ನಿಷೇಧಿತ ಲಿಕ್ವೀಡ್ ವಶಕ್ಕೆ.

ಇ ಸಿಗರೇಟ್, ಇ ಲಿಕ್ವೀಡ್ ಮಾರಾಟ ಮಾಡ್ತಿದ್ದ ಕಂಪನಿ ಗೋಡೌನ್ ಮೇಲೆ CCB  ದಾಳಿ;  25 ಲಕ್ಷ ರೂ. ಮೌಲ್ಯದ ನಿಷೇಧಿತ ಲಿಕ್ವೀಡ್ ವಶ
ಇಬ್ಬರು ಆರೋಪಿಗಳು ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
|

Updated on: May 03, 2023 | 2:39 PM

Share

ಬೆಂಗಳೂರು: ನಿಷೇಧಿತ ಇ ಸಿಗರೇಟ್(e-cigarette), ಇ ಲಿಕ್ವೀಡ್(e-liquid) ಮಾರಾಟ ಮಾಡುತ್ತಿದ್ದ ಕುಂಬಾರಪೇಟೆಯ ಕಂಪನಿ ಗೋಡೌನ್ ಮೇಲೆ ಸಿಸಿಬಿ (CCB)ಮಹಿಳಾ ಸಂರಕ್ಷಣಾ ವಿಭಾಗದಿಂದ ದಾಳಿ ಮಾಡಲಾಗಿದೆ. ಈ ವೇಳೆ ಗೋಡೋನ್​ನಲ್ಲಿ ಸಂಗ್ರಹಿಸಿದ್ದ 1 ಕೋಟಿ 25 ಲಕ್ಷ ರೂ. ಮೌಲ್ಯದ ನಿಷೇಧಿತ ಲಿಕ್ವೀಡ್, 8 ಸಾವಿರ ವಿವಿಧ ಫ್ಲೇವರ್​ನ ಇ‌-ಸಿಗರೇಟ್, 2227  ಇ-ಸಿಗರೇಟ್ ಲಿಕ್ವೀಡ್, ಇ-ಸಿಗರೇಟ್ ಪಾಡ್ ಹಾಗೂ ಕೆಲ ಬಿಡಿಭಾಗಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆಯೂ ಎರಡು ಮೂರು ಬಾರಿ ಇದೇ ಗೋಡೋನ್ ಮೇಲೆ ದಾಳಿ ಮಾಡಲಾಗಿತ್ತು. ಆದರೂ ಕೂಡ ಪದೇ ಪದೇ ಇದೇ ರೀತಿ ನಿಷೇಧಿತ ಇ‌ಸಿಗರೇಟ್ ಶೇಖರಣೆ ಮಾಡಿ ಮಾರಾಟ ಮಾಡುತ್ತಿದ್ದಾರೆ. ಸದ್ಯ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ.

ಇನ್ನು ಇದನ್ನ ಕೆಲವೊಂದು ಪಾರ್ಟಿ, ಇವೆಂಟ್​ಗಳಿಗೆ ಸರಬರಾಜು ಮಾಡಿರುವುದು ಬಯಲಿಗೆ ಬಂದಿದೆ. ಆದ್ರೆ, ಯಾವ ಯಾವ ಪಾರ್ಟಿ, ಇವೆಂಟ್ ಅನ್ನೋದು ತನಿಖೆ ಬಳಿಕ ಗೊತ್ತಾಗಬೇಕಿದೆ. ಜೊತೆಗೆ ಆನ್ ಲೈನ್ ಮೂಲಕವೂ ಇ-ಸಿಗರೇಟ್ ಮಾರಾಟ ಮಾಡುತ್ತಿರುವುದು ತಿಳಿದಿದೆ. ಈ ಇ-ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದು ಕೇಂದ್ರ ಸರ್ಕಾರ ನಿಷೇಧ ಮಾಡಿದೆ. ಆದರೂ ಇವರು ಬೇರೆ ಬೇರೆ ರಾಜ್ಯಗಳಿಂದ ತಂದು ಮಾರಾಟ ಮಾಡುತ್ತಿದ್ದರು. ಇನ್ನು ಈ ಪ್ರಕರಣ ಸಂಬಂಧ ಸಚಿನ್ ಮತ್ತು ಸಿದ್ದಲಿಂಗ ಎಂಬಿಬ್ಬರನ್ನ ಬಂಧಿಸಿ, ಗೋಡೌನ್ ಮಾಲೀಕನ ಮೇಲೆ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ಸ್ಟಡಿ ಸೆಂಟರ್​ ಮೇಲೆ ಸಿಸಿಬಿ ದಾಳಿ

ಅನಾಥ ಮಕ್ಕಳು, ವೃದ್ದರೂ, ನಿರ್ಗತಿಕರ ಕೇರ್​ ಟೇಕರ್ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರ ದಾಳಿ​​: ವಂಚನೆ ಆರೋಪ

ಬೆಂಗಳೂರು: ಅನಾಥ ಮಕ್ಕಳು, ವೃದ್ದರೂ, ನಿರ್ಗತಿಕರ ಕೇರ್​ ಟೇಕರ್​​ ಹೆಸರಲ್ಲಿ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪದ ಮೇಲೆ ಬೊಮ್ಮನಹಳ್ಳಿ ವ್ಯಾಪ್ತಿಯ ಖಾಸಗಿ ಟ್ರಸ್ಟ್​ ಮೇಲೆ ಸಿಸಿಬಿ ಪೊಲೀಸರು(CCB Police) ದಾಳಿ ನಡೆಸಿದ್ದರು. ಅಜಯ್ ಹಾಗೂ ವೆಂಕಟಾಚಲ ಎಂಬ ಇಬ್ಬರು ನಡೆಸುತ್ತಿದ್ದ ಟ್ರಸ್ಟ್ ಇದಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಸಮಾಜದಲ್ಲಿ ಎಷ್ಟೋ ಜ‌ನ ಅನಾಥ ಮಕ್ಕಳು, ವೃದ್ದರೂ, ನಿರ್ಗತಿಕರು ಇದ್ದಾರೆ. ಇಂತವರನ್ನು ಕೇರ್ ಟೇಕ್ ಮಾಡುವುದಕ್ಕೆಂದು ಅದೆಷ್ಟೋ ಸಂಸ್ಥೆಗಳು ಇವೆ. ಕೆಲವರು ಸ್ವಂತ ಹಣದಲ್ಲಿ ಕೇರ್ ಟೇಕ್ ಮಾಡಿದ್ರೆ, ಇನ್ನು ಕೆಲವರು ಫಂಡ್ ಕಲೆಕ್ಟ್ ಮಾಡಿ ನೋಡ್ಕೋತಾರೆ. ಆದ್ರೆ, ಇಲ್ಲೋಂದು ಟೀಂ ಇಂತಹ ಎಮೋಷನ್ ಫೀಲಿಂಗನ್ನೇ ಬಂಡವಾಳ ಮಾಡಿಕೊಂಡು ಕೋಟ್ಯಾಂತರ ಲೂಟಿ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!