AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ

ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರವಾಗಿರಿ. ಇಲ್ಲವಾದರೆ, ನಿಮ್ಮ ದಾಖಲೆಗಳಲ್ಲಿ ಬೇನಾಮಿ (ನಕಲಿ) ಬ್ಯಾಂಕ್ ಖಾತೆಗಳು ಸೃಷ್ಟಿಯಾಗುತ್ತದೆ. ಬೆಂಗಳೂರಿನಲ್ಲಿ ಇಂತಹ ನಕಲಿ ಖಾತೆಗಳನ್ನು ಸೃಷ್ಟಿ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ
ಬೆಂಗಳೂರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 17, 2023 | 12:39 PM

Share

ಬೆಂಗಳೂರು, ನ.17: ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರವಾಗಿರಿ. ಇಲ್ಲವಾದರೆ, ನಿಮ್ಮ ದಾಖಲೆಗಳಲ್ಲಿ ಬೇನಾಮಿ (ನಕಲಿ) ಬ್ಯಾಂಕ್ ಖಾತೆಗಳು ಸೃಷ್ಟಿಯಾಗುತ್ತದೆ. ಬೆಂಗಳೂರಿನಲ್ಲಿ (Bengaluru) ಇಂತಹ ನಕಲಿ ಖಾತೆಗಳನ್ನು ಸೃಷ್ಟಿ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಕೇರಳ‌ ಮೂಲದ ಆರೋಪಿಗಳಾದ ಸಮೀರ್, ಮಹಮ್ಮದ್ ಹಸನ್, ಅಮೂಲ್ ಬಾಬು, ಮಹಮ್ಮದ್ ಇರ್ಫಾನ್, ತಂಝೀಲ್, ಮಂಜುನಾಥ ಬಂಧಿತರು. ಜನರ ಕೆವೈಸಿ ಪಡೆದು ಬಳಿಕ ಬ್ಯಾಂಕ್ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

5 ಸಾವಿರದಿಂದ 10,000 ರೂ. ಕೊಟ್ಟು ಕೆವೈಸಿ ಪಡೆಯುತ್ತಿದ್ದ ಆರೋಪಿಗಳು, ಆಧಾರ್, ಪಾನ್ ಕಾರ್ಡ್, ಒಂದು ಸಹಿಗೆ 10,000 ರೂ. ರೇಟ್ ಫಿಕ್ಸ್ ಮಾಡಿದ್ದರು. ಪ್ರತಿ ದಾಖಲಾತಿ​ಗೆ ಹೊಸ ಸಿಮ್ ಬಳಸಿ ಖಾತೆ ತೆರೆಯುತ್ತಿದ್ದರು. ವಿದೇಶದಲ್ಲಿ ಕುಳಿತುಕೊಂಡೇ ಬೆಂಗಳೂರಿನಲ್ಲಿ ಬೇನಾಮಿ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ವಿದೇಶಿಗರಿಗೆ ನಕಲಿ ದಾಖಲಾತಿಗಳನ್ನು ​ತಯಾರಿಸಿಕೊಡುತ್ತಿದ್ದ ವ್ಯಕ್ತಿ ಅರೆಸ್ಟ್​​

ಈ ವಿಚಾರ ತಿಳಿದ ಸಿಸಿಬಿ ಪೊಲೀಸರು, ಬೃಹತ್ ಬೇನಾಮಿ ಖಾತೆ ಜಾಲ ಪತ್ತೆಹಚ್ಚಿ, ಬಂಧಿತ ಆರೋಪಿಗಳಿಂದ 150 ಕ್ಕೂ ಹೆಚ್ಚು ಬೇನಾಮಿ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಈ ಖಾತೆಗಳಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸಲಾಗಿದೆ.

ದುಬೈನಲ್ಲಿದ್ದಾನೆ ಪ್ರಕರಣದ ಕಿಂಗ್​​ಪಿನ್

ದುಬೈನಲ್ಲಿ ಕುಳಿತುಗೊಂಡಿರುವ ಕಿಂಗ್​ಪಿನ್, ಬಂಧಿತ ಆರೋಪಿಗಳಿಗೆ ಸೂಚನೆ ಕೊಡುತ್ತಿದ್ದನು. ಈತನ ಸೂಚನೆ ಮೇರೆಗೆ ಆರೋಪಿಗಳು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ದುಬೈನಲ್ಲಿರುವ ವ್ಯಕ್ತಿಗೆ ಮಾಹಿತಿ ರವಾನಿಸುತ್ತಿದ್ದರು.

ಈ ಕೃತ್ಯ ಎಸಗಲೆಂದೇ ಆರೋಪಿಗಳು ಮತ್ತಿಕೆರೆಯಲ್ಲಿ ಮನೆ ಕಂ ಕಚೇರಿ ಮಾಡಿಕೊಂಡಿದ್ದರು. ಇತ್ತೀಚೆಗೆ ಮಂಜೇಶ್ ಎಂಬಾತ ತನ್ನ ಸ್ನೇಹಿತನ ಜೊತೆ ಈ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಂಜೇಶ್ ಸ್ನೇಹಿತ ಆಧಾರ್, ಪಾನ್ ಕಾರ್ಡ್ ನೀಡಿದ್ದಲ್ಲದೆ, 10,000 ರೂ. ಕೊಡುತ್ತಾರೆ ನಿನ್ನ ದಾಖಲೆ ಕೊಡುವಂತೆ ಮಂಜೇಶ್​ಗೆ ಹೇಳಿದ್ದ. ದಾಖಲೆಗಳ ರಾಶಿ, ಬ್ಯಾಂಕ್ ಪುಸ್ತಕ ನೋಡಿ ಮಂಜೇಶ್​ಗೆ ಅನುಮಾನ ಹುಟ್ಟುಕೊಂಡಿದೆ.

ಕೂಡಲೇ ಮಂಜೇಶ್​ ಸಿಸಿಬಿ ಸೈಬರ್ ಕ್ರೈಮ್​ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ