AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಐವರು ಶಂಕಿತರ ಉಗ್ರರ ಬಂಧನಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಒಂದೊಂದೇ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಆರೋಪಿಗಳಿಗೆ ನಾಡ ಪಿಸ್ತೂಲ್​ ಸಪ್ಲೈ ಮಾಡಿದ್ದವನನ್ನು ಪತ್ತೆಹಚ್ಚಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ
ಬೆಂಗಳೂರು ಸಿಸಿಬಿ ಕಚೇರಿ
TV9 Web
| Edited By: |

Updated on: Jul 28, 2023 | 8:16 AM

Share

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ(Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ(CCB) ಅಧಿಕಾರಿಗಳ ತನಿಖೆಯಲ್ಲಿ ಒಂದಾದ ಮೇಲೊಂದು ಸ್ಫೋಟಕ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಶಂಕಿತ ಉಗ್ರರಿಗೆ ನಾಡ ಪಿಸ್ತೂಲ್ (pistol) ಸಪ್ಲೈ ಮಾಡಿದವನನ್ನು ಸಿಸಿಬಿ ಪತ್ತೆ ಮಾಡಿದೆ. ಜುನೈದ್ ಅಣತಿಯಂತೆ ರಬ್ಬಾನಿಗೆ ಪಿಸ್ತೂಲ್ ನೀಡಿದ್ದವನ ಜಾಡು ಪತ್ತೆ ಮಾಡಿದ್ದು, ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್ ಎಂಬಾತ ರಬ್ಬಾನಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದಾನೆ ಎನ್ನುವ ಸಿಸಿಬಿಗೆ ಮಾಹಿತಿ ಸಿಕ್ಕಿದೆ. ಗನ್​ ಸಪ್ಲೈ ಮಾಡಿದ ಸಲ್ಮಾನ್ ಈ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ಈತ ಸಹ ನೇಪಾಳ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ ಸಿಸಿಬಿ ಅಧಿಕಾರಿಗಳು, ಸಲ್ಮಾನ್ ಪಾಸ್ ಪೋರ್ಟ್ , ಫೋನ್ ಡಿಟೇಲ್ಸ್​ ಪಡೆದು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:  ಬೆಂಗಳೂರಿನ ಶಂಕಿತ ಉಗ್ರರ ಬೇರೆಯದ್ದೆ ಕಥೆ ಹೇಳ್ತಿವೆ ಸಿಕ್ಕ ಪಿಸ್ತೂಲ್, ವಾಕಿಟಾಕಿ, ಜೀವಂತ ಗುಂಡುಗಳು

40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆ

ವಿದೇಶದಿಂದ ಫಂಡಿಂಗ್ ಆಗಿರಯವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಸಿಸಿಬಿ, ಬಂಧಿತ ಶಂಕಿತ ಉಗ್ರರಾದ ಸುಹೈಲ್ , ತಬ್ರೇಜ್, ರಬ್ಬಾನಿ, ಮುದಾಸಿರ್ , ಉಮರ್ ಸೇರಿದಂತೆ ಕುಟುಂಬಸ್ಥರ ಸುಮಾರು 40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್​ಗಳನ್ನು ಸಿಸಿಬಿ ಪರಿಶೀಲನೆ ನಡೆಸಿದ್ದಾರೆ. ಪ್ರಮುಖ ಆರೋಪಿ ಜುನೈದ್, ವಿದೇಶದಲ್ಲಿ ಕುಳಿತುಕೊಂಡು ಶಂಕಿತರ ಅಕೌಂಟ್​ಗಳಿಗೆ ಹಣ ಹಾಕಿಸಿರುವ ಅನುಮಾನದ ಮೇಲೆ ಶಂಕಿತರ ಉಗರು ಹಾಗೂ ಅವರ ಕುಟುಂಬಸ್ಥರ ಬ್ಯಾಂಕ್​ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದ ಕಿಂಗ್ ಪಿನ್​ ವಿಚಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ A1 ಆರೋಪಿ ಟಿ ನಜೀರ್​ನನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಜುನೈದ್ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮಾಡಿಸಿರುವ ಆರೋಪ ಮೇಲೆ ಬಾಡಿ ವಾರೆಂಟ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ನಜೀರ್ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಜೈಲಲ್ಲಿ ಜುನೈದ್ ಪರಿಚಯ ಹೇಗಾಯ್ತು? ಹೇಗೆ ಮೈಂಡ್ ವಾಶ್ ಮಾಡಿದ್ದ? ಅಂತೆಲ್ಲ ವಿಚಾರಣೆ ಮಾಡಿ ಮಾಹಿತಿ ಕಲೆಹಾಕಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ