AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಐವರು ಶಂಕಿತರ ಉಗ್ರರ ಬಂಧನಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಒಂದೊಂದೇ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಆರೋಪಿಗಳಿಗೆ ನಾಡ ಪಿಸ್ತೂಲ್​ ಸಪ್ಲೈ ಮಾಡಿದ್ದವನನ್ನು ಪತ್ತೆಹಚ್ಚಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ
ಬೆಂಗಳೂರು ಸಿಸಿಬಿ ಕಚೇರಿ
TV9 Web
| Edited By: |

Updated on: Jul 28, 2023 | 8:16 AM

Share

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ(Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ(CCB) ಅಧಿಕಾರಿಗಳ ತನಿಖೆಯಲ್ಲಿ ಒಂದಾದ ಮೇಲೊಂದು ಸ್ಫೋಟಕ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಶಂಕಿತ ಉಗ್ರರಿಗೆ ನಾಡ ಪಿಸ್ತೂಲ್ (pistol) ಸಪ್ಲೈ ಮಾಡಿದವನನ್ನು ಸಿಸಿಬಿ ಪತ್ತೆ ಮಾಡಿದೆ. ಜುನೈದ್ ಅಣತಿಯಂತೆ ರಬ್ಬಾನಿಗೆ ಪಿಸ್ತೂಲ್ ನೀಡಿದ್ದವನ ಜಾಡು ಪತ್ತೆ ಮಾಡಿದ್ದು, ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್ ಎಂಬಾತ ರಬ್ಬಾನಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದಾನೆ ಎನ್ನುವ ಸಿಸಿಬಿಗೆ ಮಾಹಿತಿ ಸಿಕ್ಕಿದೆ. ಗನ್​ ಸಪ್ಲೈ ಮಾಡಿದ ಸಲ್ಮಾನ್ ಈ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ಈತ ಸಹ ನೇಪಾಳ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ ಸಿಸಿಬಿ ಅಧಿಕಾರಿಗಳು, ಸಲ್ಮಾನ್ ಪಾಸ್ ಪೋರ್ಟ್ , ಫೋನ್ ಡಿಟೇಲ್ಸ್​ ಪಡೆದು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:  ಬೆಂಗಳೂರಿನ ಶಂಕಿತ ಉಗ್ರರ ಬೇರೆಯದ್ದೆ ಕಥೆ ಹೇಳ್ತಿವೆ ಸಿಕ್ಕ ಪಿಸ್ತೂಲ್, ವಾಕಿಟಾಕಿ, ಜೀವಂತ ಗುಂಡುಗಳು

40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆ

ವಿದೇಶದಿಂದ ಫಂಡಿಂಗ್ ಆಗಿರಯವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಸಿಸಿಬಿ, ಬಂಧಿತ ಶಂಕಿತ ಉಗ್ರರಾದ ಸುಹೈಲ್ , ತಬ್ರೇಜ್, ರಬ್ಬಾನಿ, ಮುದಾಸಿರ್ , ಉಮರ್ ಸೇರಿದಂತೆ ಕುಟುಂಬಸ್ಥರ ಸುಮಾರು 40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್​ಗಳನ್ನು ಸಿಸಿಬಿ ಪರಿಶೀಲನೆ ನಡೆಸಿದ್ದಾರೆ. ಪ್ರಮುಖ ಆರೋಪಿ ಜುನೈದ್, ವಿದೇಶದಲ್ಲಿ ಕುಳಿತುಕೊಂಡು ಶಂಕಿತರ ಅಕೌಂಟ್​ಗಳಿಗೆ ಹಣ ಹಾಕಿಸಿರುವ ಅನುಮಾನದ ಮೇಲೆ ಶಂಕಿತರ ಉಗರು ಹಾಗೂ ಅವರ ಕುಟುಂಬಸ್ಥರ ಬ್ಯಾಂಕ್​ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದ ಕಿಂಗ್ ಪಿನ್​ ವಿಚಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ A1 ಆರೋಪಿ ಟಿ ನಜೀರ್​ನನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಜುನೈದ್ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮಾಡಿಸಿರುವ ಆರೋಪ ಮೇಲೆ ಬಾಡಿ ವಾರೆಂಟ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ನಜೀರ್ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಜೈಲಲ್ಲಿ ಜುನೈದ್ ಪರಿಚಯ ಹೇಗಾಯ್ತು? ಹೇಗೆ ಮೈಂಡ್ ವಾಶ್ ಮಾಡಿದ್ದ? ಅಂತೆಲ್ಲ ವಿಚಾರಣೆ ಮಾಡಿ ಮಾಹಿತಿ ಕಲೆಹಾಕಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?