AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹಗರಣ ಪ್ರಕರಣ; ಸಿಸಿಬಿಗೆ ಮಹತ್ವದ ಸುಳಿವು ಲಭ್ಯ

ಸಿಸಿಬಿ ಅಧಿಕಾರಿಗಳು ಹಂತ ಹಂತವಾಗಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಮೊಬೈಲ್ ರಿಟ್ರೀವ್ ಮಾಡಿ ಡಿಟೇಲ್ಸ್ ಟ್ಯಾಲಿ ಮಾಡಲಾಗುತ್ತಿದೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹಗರಣ ಪ್ರಕರಣ; ಸಿಸಿಬಿಗೆ ಮಹತ್ವದ ಸುಳಿವು ಲಭ್ಯ
ಸಿಸಿಬಿ ವಿಭಾಗ
TV9 Web
| Edited By: |

Updated on:May 26, 2022 | 11:08 AM

Share

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಗೆ (CCB Police) ಮಹತ್ವದ ಸುಳಿವು ಲಭ್ಯವಾಗಿದೆ. ತನಿಖೆ ವೇಳೆ ಸಿಸಿಬಿ ತಂಡ ಮತ್ತೆರಡು ವಿಷಯಗಳ ಪ್ರಶ್ನೆ ಪತ್ರಿಕೆ (Question Paper) ಸೋರಿಕೆಯಾಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳ ಮುಂದೆ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಪೊಲೀಸ್ ಕಮಿಷನರ್ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಈ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ಹಂತ ಹಂತವಾಗಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಮೊಬೈಲ್ ರಿಟ್ರೀವ್ ಮಾಡಿ ಡಿಟೇಲ್ಸ್ ಟ್ಯಾಲಿ ಮಾಡಲಾಗುತ್ತಿದೆ. ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಿಸಿಬಿ ಪತ್ರ ಬರೆದಿದೆ. ಕೆಇಎಯಿಂದ ಉತ್ತರ ಬಾರದ ಹಿನ್ನೆಲೆ ನೋಟಿಸ್ ನೀಡುವ ಸಾಧ್ಯತೆಯೂ ಇದೆ.

ಕೆಲ ಶಂಕಿತ ಅಭ್ಯರ್ಥಿಗಳ OMR ಶೀಟ್​ಗಳನ್ನ ನೀಡುವಂತೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಒಎಂಆರ್ ಶೀಟ್ಗಳನ್ನು ಪಡೆದು ಸಿಸಿಬಿ ಅಧಿಕಾರಿಗಳು ತಾಳೆ ಹಾಕಲಿದ್ದಾರೆ.

ಇದನ್ನೂ ಓದಿ
Image
Faf du Plessis: ಪಟಿದಾರ್ ಶತಕದ ಬಗ್ಗೆ ಖುಷಿ ತಾಳಲಾರದೆ ಫಾಪ್ ಡುಪ್ಲೆಸಿಸ್ ನೀಡಿದ ಹೇಳಿಕೆ ಏನು ಗೊತ್ತೇ?
Image
ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್
Image
ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ

ಇದನ್ನೂ ಓದಿ: ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?

ಆರೋಪಿ ಸೌಮ್ಯ ಬಂಧನ: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೌಮ್ಯರನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದರು. ಪೊಲೀಸರು ಮೈಸೂರಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಆರೋಪಿ ಸೌಮ್ಯ ಮೈಸೂರು ವಿವಿ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿವಿಯಲ್ಲಿ ಎಂಎಸ್​ಸಿ ಓದಿರುವ ಸೌಮ್ಯ, ಪ್ರೊಫೆಸರ್ ಹೆಚ್.ನಾಗರಾಜ್ ಎಂಬುವರ ಬಳಿ ಪಿಹೆಚ್​ಡಿ ಮುಗಿಸಿದ್ದಾರೆ. ಜಿಐಎಸ್ ಅಂಡ್ ಅಗ್ರಿಕಲ್ಚರ್ ಜಿಯಾಗ್ರಫಿಯಲ್ಲಿ ಪಿಹೆಚ್​ಡಿ ಮಾಡಿದ್ದಾರೆ. ಸದ್ಯ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Thu, 26 May 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ