AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಸಿಸಿಬಿ ಇನ್ಸ್​ಪೆಕ್ಟರ್ ಅಮಾನತು

ಪ್ರತ್ಯೇಕ ಘಟನೆ: ಸಿಸಿಬಿಯ ರೌಡಿ ನಿಗ್ರಹದಳದ ಇನ್ಸ್​​ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್​ ಕಾಡುಬೀಸನಹಳ್ಳಿ ರೋಹಿತ್ ಜೊತೆ ಲಿಂಕ್​ ಹೊಂದಿದ್ದ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ಮತ್ತೊಂದು ಘಟನೆಯಲ್ಲಿ ರೌಡಿಶೀಟರ್​​ನ ಕೊಲೆಗೆ ಸಂಜು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಸಿಸಿಬಿ ಇನ್ಸ್​ಪೆಕ್ಟರ್ ಅಮಾನತು
ಸಿಸಿಬಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Apr 20, 2024 | 2:53 PM

Share

ಬೆಂಗಳೂರು ಏಪ್ರಿಲ್​ 20: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್​ಪೆಕ್ಟರ್ (Inspector) ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು.

ಆದರೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ವಿರುದ್ಧ ಪೊಲೀಸ್ ಆಯುಕ್ತ ವರದಿ ನೀಡುತ್ತಾರೆ. ವರದಿ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸುತ್ತಾರೆ.

ಜೈಲಿನಿಂದಲೇ ಕುಖ್ಯಾತ ರೌಡಿಶೀಟರ್ ಹತ್ಯೆಗೆ ಸಂಚು

ಜೈಲಿನಲ್ಲಿ ಇದ್ದುಕೊಂಡೇ ಕುಖ್ಯಾತ ರೌಡಿಶೀಟರ್​ ಕುಣಿಗಲ್ ಗಿರಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮತ್ತಿಬ್ಬರಿಗಾಗಿ ಬಲೆ ಬೀಸಿದ್ದಾರೆ. ಸಿಲಿಂಡರ್ ಸುನೀಲ, ಅವಿನಾಶ್​ ಬಂಧಿತ ಆರೋಪಿಗಳು. ಸೂರಿ ಕೊಲೆ ಪ್ರಕರಣದಲ್ಲಿ ರಾಬರಿ ಕಿಟ್ಟಿ ಕ್ಯಾಪ್ಟರ್ ಜೈಲಿನಲ್ಲಿದ್ದಾನೆ. ಜೈಲಿನಲ್ಲಿರುವ ರಾಬರಿ ಕಿಟ್ಟಿ, ಕಾಮಾಕ್ಷಿಪಾಳ್ಯದ ರೌಡಿಶೀಟರ್ ಆಗಿರುವ ಕುಣಿಗಲ್ ಗಿರಿ ಕೊಲೆಗೆ ಸಂಚು ರೂಪಿಸಿದ್ದನು.

ಇದನ್ನೂ ಓದಿ: CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಕುಣಿಗಲ್ ಗಿರಿಯನ್ನು ಕೊಲೆ ಮಾಡಲು ರಾಬರಿ ಕಿಟ್ಟಿ ಶಿಷ್ಯನಾದ ಸಿಲಿಂಡರ್ ಸುನೀಲನಿಗೆ ಸುಪಾರಿ ನೀಡಿದ್ದನು. ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಸುನೀಲ ಅಡ್ಡೆ ಮೇಲೆ ದಾಳಿ ಮಾಡಿ ಸಿಲಿಂಡರ್ ಸುನೀಲ ಮತ್ತು ಈತನ ಸಹಚರ ಅವಿನಾಶ್​​ನನ್ನು ಬಂಧಿಸಿದ್ದಾರೆ. ಸಿಲಿಂಡರ್ ಸುನೀಲ ಕೆಂಗೇರಿ ಪೊಲೀಸ್​ ಠಾಣೆ ವ್ಯಪ್ತಿಯ ರೌಡಿಶೀಟರ್ ಆಗಿದ್ದಾನೆ.

ದಾಳಿ ವೇಳೆ ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ