AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಸಿಸಿಬಿ ಇನ್ಸ್​ಪೆಕ್ಟರ್ ಅಮಾನತು

ಪ್ರತ್ಯೇಕ ಘಟನೆ: ಸಿಸಿಬಿಯ ರೌಡಿ ನಿಗ್ರಹದಳದ ಇನ್ಸ್​​ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್​ ಕಾಡುಬೀಸನಹಳ್ಳಿ ರೋಹಿತ್ ಜೊತೆ ಲಿಂಕ್​ ಹೊಂದಿದ್ದ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ಮತ್ತೊಂದು ಘಟನೆಯಲ್ಲಿ ರೌಡಿಶೀಟರ್​​ನ ಕೊಲೆಗೆ ಸಂಜು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಸಿಸಿಬಿ ಇನ್ಸ್​ಪೆಕ್ಟರ್ ಅಮಾನತು
ಸಿಸಿಬಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 20, 2024 | 2:53 PM

Share

ಬೆಂಗಳೂರು ಏಪ್ರಿಲ್​ 20: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್​ಪೆಕ್ಟರ್ (Inspector) ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು.

ಆದರೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ವಿರುದ್ಧ ಪೊಲೀಸ್ ಆಯುಕ್ತ ವರದಿ ನೀಡುತ್ತಾರೆ. ವರದಿ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸುತ್ತಾರೆ.

ಜೈಲಿನಿಂದಲೇ ಕುಖ್ಯಾತ ರೌಡಿಶೀಟರ್ ಹತ್ಯೆಗೆ ಸಂಚು

ಜೈಲಿನಲ್ಲಿ ಇದ್ದುಕೊಂಡೇ ಕುಖ್ಯಾತ ರೌಡಿಶೀಟರ್​ ಕುಣಿಗಲ್ ಗಿರಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮತ್ತಿಬ್ಬರಿಗಾಗಿ ಬಲೆ ಬೀಸಿದ್ದಾರೆ. ಸಿಲಿಂಡರ್ ಸುನೀಲ, ಅವಿನಾಶ್​ ಬಂಧಿತ ಆರೋಪಿಗಳು. ಸೂರಿ ಕೊಲೆ ಪ್ರಕರಣದಲ್ಲಿ ರಾಬರಿ ಕಿಟ್ಟಿ ಕ್ಯಾಪ್ಟರ್ ಜೈಲಿನಲ್ಲಿದ್ದಾನೆ. ಜೈಲಿನಲ್ಲಿರುವ ರಾಬರಿ ಕಿಟ್ಟಿ, ಕಾಮಾಕ್ಷಿಪಾಳ್ಯದ ರೌಡಿಶೀಟರ್ ಆಗಿರುವ ಕುಣಿಗಲ್ ಗಿರಿ ಕೊಲೆಗೆ ಸಂಚು ರೂಪಿಸಿದ್ದನು.

ಇದನ್ನೂ ಓದಿ: CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಕುಣಿಗಲ್ ಗಿರಿಯನ್ನು ಕೊಲೆ ಮಾಡಲು ರಾಬರಿ ಕಿಟ್ಟಿ ಶಿಷ್ಯನಾದ ಸಿಲಿಂಡರ್ ಸುನೀಲನಿಗೆ ಸುಪಾರಿ ನೀಡಿದ್ದನು. ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಸುನೀಲ ಅಡ್ಡೆ ಮೇಲೆ ದಾಳಿ ಮಾಡಿ ಸಿಲಿಂಡರ್ ಸುನೀಲ ಮತ್ತು ಈತನ ಸಹಚರ ಅವಿನಾಶ್​​ನನ್ನು ಬಂಧಿಸಿದ್ದಾರೆ. ಸಿಲಿಂಡರ್ ಸುನೀಲ ಕೆಂಗೇರಿ ಪೊಲೀಸ್​ ಠಾಣೆ ವ್ಯಪ್ತಿಯ ರೌಡಿಶೀಟರ್ ಆಗಿದ್ದಾನೆ.

ದಾಳಿ ವೇಳೆ ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​