AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ ತೆರಿಗೆ ವಂಚಿಸಿ ಅನಧಿಕೃತವಾಗಿ ಸಂಚರಿಸುತ್ತಿರುವ ಐಶಾರಾಮಿ ಕಾರುಗಳಿಗೆ ಸಿಸಿಬಿ ಗಾಳ!

ರೋಸ್ ಮಾರ್ಟ್ ಕಂಪನಿ ರಾಜ್ಯಾದ್ಯಂತ ಆರ್​ಸಿ ಸ್ಮಾರ್ಟ್ ಕಾರ್ಡ್​ನ ಆರ್​ಟಿಓಗೆ ಪೂರೈಕೆ ಮಾಡುತ್ತಿದೆ. ಸಿಸಿಬಿ ತನಿಖೆ ವೇಳೆ ಈ ಔಟ್ ಸೋರ್ಸ್ ಕಂಪನಿಯ ಅಸಲಿಯತ್ತು ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ರಸ್ತೆ ತೆರಿಗೆ ವಂಚಿಸಿ ಅನಧಿಕೃತವಾಗಿ ಸಂಚರಿಸುತ್ತಿರುವ ಐಶಾರಾಮಿ ಕಾರುಗಳಿಗೆ ಸಿಸಿಬಿ ಗಾಳ!
ಬೆಂಗಳೂರು ರಸ್ತೆ
TV9 Web
| Edited By: |

Updated on: Oct 19, 2021 | 11:47 AM

Share

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ತೆರಿಗೆ ಪಾವತಿಸದೆ ಕೋಟ್ಯಂತರ ಮೌಲ್ಯದ ಐಶಾರಾಮಿ ಕಾರುಗಳು ಸಂಚರಿಸುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿದೆ. ಮರ್ಸಿಡೀಸ್ ಬೆನ್ಜ್, ಪೋರ್ಶೆ, ಜಾಗ್ವಾರ್, ಲ್ಯಾಂಬೋರ್ಗಿನಿ, ಬಿಎಂಡಬ್ಲ್ಯೂ, ಇನ್ನೋವಾ ಕ್ರಿಸ್ಟಾ ಸೇರಿದಂತೆ ಐಶಾರಾಮಿ ಕಾರುಗಳು ರೋಡ್ ಟ್ಯಾಕ್ಸ್ ಪಾವತಿಸದೆ ಸಂಚರಿಸುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕಿದೆ. ರಸ್ತೆ ತೆರಿಗೆ ವಂಚನೆ ಜಾಲಾದಲ್ಲಿ ಭಾಗಿಯಾಗಿದ್ದ ಸ್ಮಾರ್ಟ್ ಕಾರ್ಡ್ ಕಂಪನಿ ಮ್ಯಾನೇಜರ್ ಅರೆಸ್ಟ್ ಆಗಿದ್ದು, ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರೋಸ್ ಮಾರ್ಟ್ ಕಂಪನಿ ರಾಜ್ಯಾದ್ಯಂತ ಆರ್​ಸಿ ಸ್ಮಾರ್ಟ್ ಕಾರ್ಡ್​ನ ಆರ್​ಟಿಓಗೆ ಪೂರೈಕೆ ಮಾಡುತ್ತಿದೆ. ಸಿಸಿಬಿ ತನಿಖೆ ವೇಳೆ ಈ ಔಟ್ ಸೋರ್ಸ್ ಕಂಪನಿಯ ಅಸಲಿಯತ್ತು ಬೆಳಕಿಗೆ ಬಂದಿದೆ. ರೋಸ್ ಮಾರ್ಟ್ ಕಂಪನಿ ಆರ್​ಟಿಓ ಅಧಿಕಾರಿಗಳಿಗೆ ಯಾಮಾರಿಸಿ ನಕಲಿ ನಂಬರ್ ಪ್ಲೇಟ್​ಗಳನ್ನು ನೀಡಿದೆ. ಇದೇ ರೀತಿ 27 ಕಾರುಗಳು ನಕಲಿ ನಂಬರ್ ಪ್ಲೇಟ್​ಗಳನ್ನ ಅಳವಡಿಸಿ ರಸ್ತೆಯಲ್ಲಿ ಓಡಾಡುತ್ತಿವೆ. ಓಡಾಡುತ್ತಿರುವ ಕಾರುಗಳೆಲ್ಲವೂ ಕೋಟ್ಯಾಂತರ ರೂಪಾಯಿ ಮೌಲ್ಯದ್ದು ಎಂದು ತಿಳಿದುಬಂದಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ರೋಚಕ ಸಂಗತಿ ಆನಂದ್ ರಾಮ್ ಎಂಬ ವ್ಯಕ್ತಿ ತಮ್ಮ ಜಾಗ್ವಾರ್ ಕಾರಿಗೆ ಎನ್ಓಸಿ ಪಡೆದು ಕಾರನ್ನು ಕರ್ನಾಟಕ ರಿಜಿಸ್ಟ್ರೇಷನ್​ಗೆ ವರ್ಗಾವಣೆ ಮಾಡಲು ಬಂದಿದ್ದಾರೆ. ಆಗ ಕಾರನ್ನು ನಕಲಿ ನಂಬರ್​ನಲ್ಲಿ ರಿಜಿಸ್ಟರ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ದೂರು ಕೊಟ್ಟ ಬಳಿಕ ತನಿಖೆಗೆ ಇಳಿದ ಸಿಸಿಬಿಗೆ ಮತ್ತೊಂದು ಶಾಕ್ ಕಾದಿತ್ತು. ಪಶ್ಚಿಮ ಬಂಗಾಳದ WB01 ಸೀರಿಸ್ ಅಲ್ಲಿ ಜಾಗ್ವಾರ್ ಕಾರನ್ನು ಇಲ್ಲಿ ರಿಜಿಸ್ಟರ್ ಮಾಡಿದ್ರು. ಆದರೆ ಪಶ್ಚಿಮ ಬಂಗಾಳದಲ್ಲಿ WB01 ಸೀರಿಸ್ ದ್ವಿಚಕ್ರ ವಾಹನಗಳಿಗೆ ನೀಡಿರುವುದಾಗಿ ಮಾಹಿತಿ ಇದೆ. ಬೆಂಗಳೂರಿನಲ್ಲಿ WB01 ಅಡಿಯಲ್ಲಿ ಜಾಗ್ವಾರ್ ಕಾರು ಚಲಾಯಿಸಿದೆ. ಇದೇ ರೀತಿ 27 ಐಷಾರಾಮಿ ಕಾರುಗಳನ್ನು ನಕಲಿ ನಂಬರ್ ಪ್ಲೇಟ್​ನಲ್ಲಿ ಚಲಾಯಿಸುತ್ತಿರುವ ಬಗ್ಗೆ ಮಾಹಿತಿ ಸಿಸಿಬಿಗೆ ಲಭ್ಯವಾಗಿದೆ.

ರಸ್ತೆ ತೆರಿಗೆ ವಂಚಿಸಿ ಅನಧಿಕೃತವಾಗಿ ಸಂಚರಿಸುತ್ತಿರುವ ಐಶಾರಾಮಿ ಕಾರುಗಳಿಗೆ ಸಿಸಿಬಿ ಗಾಳ ಹಾಕಿದೆ. ಗಿರೀಶ್ ಅನ್ನ ವಶಕ್ಕೆ ಪಡೆದಿರುವ ಸಿಸಿಬಿ ಇನ್ನಷ್ಟು ಮಾಹಿತಿ ಕೆದಕುತ್ತಾ ಇದೆ. WB, PY, RJ ರಿಜಿಸ್ಟ್ರೇಷನ್ ಅಲ್ಲಿ ಈ ಕಾರುಗಳು ಇವೆ ಎನ್ನುವುದು ಗೊತ್ತಾಗಿದೆ. ವಂಚನೆಯಲ್ಲಿ ಆರ್​ಟಿಓ ಅಧಿಕಾರಿಗಳ ಪಾಲುದಾರಿಕೆ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ತನಿಖೆ ಚುರುಕುಗೊಂಡಿದೆ.

ಇದನ್ನೂ ಓದಿ

ಮಂಗಳೂರು: ‘ದೌರ್ಜನ್ಯದ ಆರೋಪ ನನ್ನ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ’; ವಕೀಲ ರಾಜೇಶ್ ಭಟ್ ಹೇಳಿಕೆ

ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವ್ರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು: ರಮೇಶ್ ಜಾರಕಿಹೊಳಿ ವ್ಯಥೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ