ಬಿಬಿಎಂಪಿ ಚುನಾವಣೆಗೆ ಸಿದ್ಧರಾಗುತ್ತಿದ್ದ ರೌಡಿಶೀಟರ್​ಗಳು: ಹಠಾತ್ ದಾಳಿಗೆ ಕಾರಣ ತಿಳಿಸಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

ಕೆಲವು ರೌಡಿಶೀಟರ್​ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು. ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಸಿದ್ಧರಾಗುತ್ತಿದ್ದ ರೌಡಿಶೀಟರ್​ಗಳು: ಹಠಾತ್ ದಾಳಿಗೆ ಕಾರಣ ತಿಳಿಸಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ
ಸಿಸಿಬಿ ಜಂಟಿ ಆಯುಕ್ತ ಶರಣಪ್ಪ
Follow us
| Updated By: ಆಯೇಷಾ ಬಾನು

Updated on:Nov 23, 2022 | 11:46 AM

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಸಿಸಿಬಿ ಪೊಲೀಸರು(CCB Police) ರೌಡಿಶೀಟರ್(​Rowdy Sheeters) ಮನೆಗಳ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ನಗರದ ಸುಮಾರು 86 ಮಂದಿಗೆ ಚಳಿ ಬಿಡಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ(CCB Joint Commissioner Sharanappa), ಕೆಲವು ರೌಡಿಶೀಟರ್​ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು. ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದರು.

ನ್ಯಾಯಾಲಯದ ವಾರೆಂಟ್ ಇದ್ದರು ಕೆಲವರು ಕೋರ್ಟ್​ಗೆ ಅಟೆಂಡ್ ಆಗಿರಲಿಲ್ಲ. ಇನ್ನೂ ಕೆಲವರು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿ ಇದ್ರು. ಕೆಲವರು ತಮ್ಮ ಮನೆಯವರನ್ನ ಚುನಾವಣೆಗೆ ನಿಲ್ಲಿಸೋಕೆ ಸಿದ್ದತೆ ಮಾಡಿದ್ರು. ಕೆಲವರು ಚುನಾವಣೆಗಾಗಿ ಹಣಕಾಸು ವಸೂಲಿ ಮಾಡ್ತಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಸಲುವಾಗಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಕೆಲವರು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ವಶಕ್ಕೆ ‌ಪಡೆದಿರುವ 26 ರೌಡಿಗಳ ವಿಚಾರಣೆ ನಡೆಸಲಾಗುತ್ತೆ. ರೌಡಿಗಳ ಆದಾಯ ಮತ್ತು ಅವರು‌ ಚಟುವಟಿಕೆಗಳ ಬಗ್ಗೆ ತನಿಖೆ ಮಾಡ್ತಾ ಇದ್ದೀವಿ. ಕೆಲ ರೌಡಿಗಳ ಮನೆ ಮೇಲೆ ದಾಳಿ ವೇಳೆ ಮಾರಾಕಾಸ್ತ್ರಗಳು ಪತ್ತೆ ಆಗಿವೆ ಎಂದು ಜಂಟಿ ಆಯುಕ್ತ ಡಾ. ಶರಣಪ್ಪ ಮಾಹಿತಿ ನೀಡಿದರು.

ಇದನ್ನೂ ಓದಿ: ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್

ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Wed, 23 November 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ