AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ತನಿಖೆಯಲ್ಲಿ ಎಡವಿದ್ರಾ ಸಿಸಿಬಿ ಅಧಿಕಾರಿಗಳು?

ಸಿಸಿಬಿ ಅಧಿಕಾರಿಗಳು ಕಚೇರಿಯಲ್ಲಿ ಚೈತ್ರಾ ಮೇಲೆ ಸರಿಯಾದ ನಿಗಾ ಇಡದೆ ಆಕೆ ಕೇಳಿದಾಕ್ಷಣ ಸೋಪ್ ಕೊಟ್ಟು ಆಸ್ಪತ್ರೆ ಸೇರುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಪಿಟ್ಸ್ ಲಕ್ಷಣ ಇಲ್ಲ ಎಂದು ವೈದ್ಯರು ದೃಢ ಪಡಿಸಿದ್ದಾರೆ. ನೊರೆ ಬಂದಿರೋದು ಕೃತಕ ಎಂದಿದ್ದಾರೆ. ಹೀಗಿದ್ದರು ಆರೋಪಿ ಚೈತ್ರಾ ಕುಂದಾಪುರ 4 ದಿನ ಆಸ್ಪತ್ರೆಯಲ್ಲೇ ಕಳೆದಿದ್ದೇಕೆ?

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ತನಿಖೆಯಲ್ಲಿ ಎಡವಿದ್ರಾ ಸಿಸಿಬಿ ಅಧಿಕಾರಿಗಳು?
ಚೈತ್ರಾ ಕುಂದಾಪುರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 19, 2023 | 8:51 AM

Share

ಬೆಂಗಳೂರು, ಸೆ.19: MLA ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣ ಸಂಬಂಧ ಚೈತ್ರಾ(Chaitra Kundapura) ಆ್ಯಂಡ್ ಗ್ಯಾಂಗ್ ಬಂಧನ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಗೆ(CCB Police) ಸಾಲು ಸಾಲು ವೈಫಲ್ಯವಾಗಿದೆ. ಇಡೀ ಪ್ರಕರಣ ತನಿಖೆಯಲ್ಲಿ ಸಾಕಷ್ಟು ಲೋಪ ಕಂಡಬಂದಿದೆ. ಸಿಸಿಬಿಗೆ ಕೇಸ್ ವರ್ಗಾವಣೆ ಆಗಿ 10 ದಿನವೇ ಕಳೆದೋಯ್ತು. ಮೂರನೇ ಆರೋಪಿ ಅಭಿನವ ಹಾಲಶ್ರೀ ಬಂಧನವಾಗಿಲ್ಲ. ಸಿಸಿಬಿ ಪೊಲೀಸರಿಗೆ ಇದುವರೆಗೆ ಹಾಲಶ್ರೀ ಸ್ವಾಮೀಜಿ ಸಂಬಂಧ ಸಣ್ಣ ಸುಳಿವು ಕೂಡ ಸಿಕ್ಕಿಲ್ಲ.

ಸಿಸಿಬಿ ತನಿಖಾಧಿಕಾರಿಗೆ ಇದ್ಯಾ ರಾಜಕೀಯ ಒತ್ತಡ?

ಸ್ವಾಮೀಜಿ ಬಂಧನ ತಡವಾದರೆ ನಿರೀಕ್ಷಣ ಜಾಮೀನು ಸಿಗೊ ಸಾಧ್ಯತೆ ಇದೆ. ಕೇವಲ ಸ್ವಾಮೀಜಿ ಮಾತ್ರ ಅಲ್ಲ ಚೈತ್ರಾ, ಚನ್ನಾ ನಾಯ್ಕ್ ವಿಚಾರದಲ್ಲೂ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಚನ್ನಾ ನಾಯ್ಕ್ ಬೆಂಗಳೂರಲ್ಲಿ ಇದ್ದರೂ ತನಿಖಾಧಿಕಾರಿಗಳು ಬಂಧಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಪ್ರಕರಣದ ಐದನೇ ಆರೋಪಿಯಾಗಿರುವ ಚನ್ನಾ ನಾಯ್ಕ್ ಮಾಧ್ಯಮ ಮುಂದೆ ಬಂದ ನಂತರ ಅಲರ್ಟ್ ಆದ ತನಿಖಾತಂಡ ತರಾತುರಿಯಲ್ಲಿ ಮಾಧ್ಯಮದವರನ್ನ ಫಾಲೊ ಮಾಡಿ ಬಂಧಿಸಿದೆ. ಹೀಗಾಗಿ ಸಿಸಿಬಿ ತನಿಖಾಧಿಕಾರಿಗಳಿಗೆ ರಾಜಕೀಯ ಒತ್ತಡ ಇದೆಯಾ ಎಂಬ ಮಾತುಗಳು ಹೇಳೀ ಬರುತ್ತಿವೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: ಉಡುಪಿಯಲ್ಲಿ ಎಫ್​ಐಆರ್ ದಾಖಲು

ವಿಚಾರಣೆಯಿಂದ ಚೈತ್ರ ತಪ್ಪಿಸಿಕೊಳ್ಳಲು ಸಿಸಿಬಿ ಅಧಿಕಾರಿಗಳೇ ಕಾರಣನಾ?

ಸಿಸಿಬಿ ಅಧಿಕಾರಿಗಳು ಕಚೇರಿಯಲ್ಲಿ ಚೈತ್ರಾ ಮೇಲೆ ಸರಿಯಾದ ನಿಗಾ ಇಡದೆ ಆಕೆ ಕೇಳಿದಾಕ್ಷಣ ಸೋಪ್ ಕೊಟ್ಟು ಆಸ್ಪತ್ರೆ ಸೇರುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಪಿಟ್ಸ್ ಲಕ್ಷಣ ಇಲ್ಲ ಎಂದು ವೈದ್ಯರು ದೃಢ ಪಡಿಸಿದ್ದಾರೆ. ನೊರೆ ಬಂದಿರೋದು ಕೃತಕ ಎಂದಿದ್ದಾರೆ. ಹೀಗಿದ್ದರು ಆರೋಪಿ ಚೈತ್ರಾ ಕುಂದಾಪುರ 4 ದಿನ ಆಸ್ಪತ್ರೆಯಲ್ಲೇ ಕಳೆದಿದ್ದೇಕೆ? ಬೆಳಗ್ಗೆ ಸಿಸಿಬಿ ಕಚೇರಿಗೆ, ಸಂಜೆ ಮಹಿಳಾ ಸಾಂತ್ವನ ಕೇಂದ್ರಕ್ಕೆ. ಕೋರ್ಟ್ ಕಸ್ಟಡಿಗೆ ನೀಡಿದ್ರು ಕೂಡ ಸಿಸಿಬಿ ಸಮಯ ವ್ಯರ್ಥ ಮಾಡಿಕೊಳ್ತಿದೆ?

ಇದೆಲ್ಲದರ ನಡುವೆ ಚೈತ್ರಾ ಕುಂದಾಪುರ ರಾಜಾರೋಷವಾಗಿ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದರು. ಪ್ರಕರಣ ಡೈವರ್ಟ್ ಮಾಡಲು ಇಂದಿರಾ ಕ್ಯಾಂಟಿನ್ ಹೆಸರು ಬಳಕೆ ಮಾಡಿದ್ದರು. ಓಡಾಡುವ ಸ್ಥಿತಿಯಲ್ಲಿದ್ರು ಸಿಸಿಬಿ ಯಾವುದೇ ಹೇಳಿಕೆ ದಾಖಲು ಮಾಡಿಲ್ಲ. ಚೈತ್ರಾಳಿಂದ ಸಮರ್ಪಕ ಉತ್ತರ ಪಡೆಯುವಲ್ಲಿ ಸಿಸಿಬಿ ವಿಫಲವಾಗಿದೆ? ಪ್ರಕರಣದಲ್ಲಿ ಮತ್ತಷ್ಟು ಪ್ರಭಾವಿಗಳ ಹೆಸರು ಕೇಳಿ ಬಂದಿದೆ. ಆದರು ಅವರಿಂದ ಮಾಹಿತಿ ಪಡೆಯಲು ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಚೈತ್ರಾ ಕುಂದಾಪುರ ಪ್ರಕರಣದ ತನಿಖೆಯನ್ನು ಸಿಸಿಬಿ ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ ಎನ್ನಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ