AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬರೋಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ; ಏನೇನೆಲ್ಲ ಜಪ್ತಿ?

ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ನ್ನು ಬೆಂಗಳೂರಿನಲ್ಲಿ ಜಪ್ತಿ ಮಾಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳು ಹೆಬ್ಬಗೋಡಿಯಲ್ಲಿ ವಾಸವಿದ್ದರು. ಟೆಕ್ಕಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿಕೊಂಡು ವ್ಯವಹಾರ ನಡೆಸುತ್ತಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.

Bengaluru: ಬರೋಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ; ಏನೇನೆಲ್ಲ ಜಪ್ತಿ?
7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 29, 2025 | 11:43 AM

Share

ಬೆಂಗಳೂರು, ಸೆಪ್ಟೆಂಬರ್​ 29: ಸಿಲಿಕಾನ್​ ಸಿಟಿಯಲ್ಲಿ ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ನ್ನು (Drugs) ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನ ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ದೆಹಲಿ ಮತ್ತು ಮುಂಬಯಿಂದ ಆರೋಪಿಗಳು ಡ್ರಗ್ಸ್​ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಬಂಧಿತರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆ.ಜಿ. ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿಯಲ್ಲಿ ಮನೆ ಮಾಡಿದ್ದ ಆರೋಪಿಗಳು, ಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೊಕೇಶನ್​ ಶೇರ್​ ಮಾಡಿ ವ್ಯವಹಾರ ನಡೆಸುತ್ತಿದ್ದರು. ಡ್ರಗ್ಸ್​ ಹಣವನ್ನ ಆನ್​ ಲೈನ್​ ಮೂಲಕ ಸ್ವೀಕರಿಸುತ್ತಿದ್ದರು. ಟೆಕ್ಕಿಗಳು, ವಿದ್ಯಾರ್ಥಿಗಳೇ ಇವರ ಟಾರ್ಗೆಟ್​ ಆಗಿತ್ತು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: 1 ಕೋಟಿ ರೂ. ದರೋಡೆ ಮಾಡಿದವರ ಅರ್ಧ ಗಂಟೇಲಿ ಖೆಡ್ಡಾಕ್ಕೆ ಕೆಡವಿದ ಬೆಂಗಳೂರು ಪೊಲೀಸರು! ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ರಾಬರಿ ಗ್ಯಾಂಗ್​ ಬಂಧನ

ಬೆಂಗಳೂರು ಹೊರವಲಯದಲ್ಲಿ ರಾಬರಿ ನಸಡೆಸುತ್ತಿದ್ದ ಅಪ್ರಾಪ್ತರ ಗ್ಯಾಂಗ್​ ಹೆಡೆಮುರಿಕಟ್ಟುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಜನ ಅಪ್ರಾಪ್ತರು ಸೇರಿ ಅಪರಾಧ ಹಿನ್ನಲೆ ಇರೋ ಓರ್ವನನ್ನು ಒಳಗೊಂಡಿದ್ದ ತಂಡವನ್ನ ಬಂಧಿಸಲಾಗಿದೆ. ಕೇವಲ ಮೂರು ದಿನಗಳಲ್ಲಿ 37 ಕಡೆ ಈ ಗ್ಯಾಂಗ್​ ರಾಬರಿ ನಡೆಸಿತ್ತು. ಮಾದನಾಯಕನಹಳ್ಳಿ, ದೊಡ್ಡಬಳ್ಳಾಪುರ, ಸೂರ್ಯನಗರ, ನೆಲಮಂಗಲ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ಗ್ಯಾಂಗ್​ ಕೈ ಚಳಕ ತೋರಿಸಿ, ಭಾರಿ ಪ್ರಮಾಣದಲ್ಲಿ ಕಳ್ಳತನ ನಡೆಸಿತ್ತು.

ರಾತ್ರಿ ವೇಳೆ ಮೂರು ಬೈಕ್​ಗಳಲ್ಲಿ ಸುತ್ತುತ್ತಿದ್ದ ಈ ಖತರ್ನಾಕ್​ ಟೀಂ, ಕಾರಿನಲ್ಲಿ ಬರೋರು ಹಾಗೂ ಲಾರಿಗಳನ್ನು ಅಡ್ಡಹಾಕಿ ಸುಲಿಗೆ ಮಾಡುತ್ತಿತ್ತು. ಚಾಕು ತೋರಿಸಿ ಮೊಬೈಲ್, ಹಣ ಪಡೆದು ಆರೋಪಿಗಳು ಎಸ್ಕೇಪ್​ ಆಗುತ್ತಿದ್ದರು. ಹಣ ಕೊಡಲು‌ ನಿರಾಕರಿಸಿದ್ರೆ ಚಾಕು ಹಾಕಿ ಓಡಿ ಹೋಗುತ್ತಿದ್ದರು. ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಸಿಸಿ ಕ್ಯಾಮರಾ ಪರಿಶೀಲಸಿದಾಗ ಪ್ರಕರಣಗಳ ಹಿಂದೆ ಒಂದು ಟೀಂ ಇರೋದು ಗೊತ್ತಾಗಿತ್ತು. ಆರೋಪಿಗಳ ಸೆರೆಗೆ ವಿಶೇಷ ತಂಡ ರಚಿಸಿದ್ದ ಪೊಲೀಸರು ಗ್ಯಾಂಗ್ ಸದಸ್ಯರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 9 ಮೊಬೈಲ್​ ಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Mon, 29 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್