Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ವೈದ್ಯನನ್ನು ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್; ವೈದ್ಯನ ಸ್ನೇಹಿತ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ

ಡಾ.ಶಂಕರನ್ನು ಹನಿಟ್ರ್ಯಾಪ್ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಗ್ಯಾಂಗನ್ನು ಬಂಧಿಸಿದ್ದು ಡಾ.ಶಂಕರ್ ಸ್ನೇಹಿತ ನಾಗರಾಜ್ನಿಂದಲೇ ಹನಿಟ್ರ್ಯಾಪ್ ನಡೆದಿರುವುದು ಬೆಳಕಿಗೆ ಬಂದಿದೆ.

ಹಣಕ್ಕಾಗಿ ವೈದ್ಯನನ್ನು ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್; ವೈದ್ಯನ ಸ್ನೇಹಿತ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: May 27, 2022 | 7:58 AM

ಬೆಂಗಳೂರು: ಕಲಬುರಗಿ ವೈದ್ಯನನ್ನು ಹನಿಟ್ರ್ಯಾಪ್(Honey Trap) ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಮೂಲದವರಾದ ವೈದ್ಯ ಡಾ.ಶಂಕರನ್ನು ಹನಿಟ್ರ್ಯಾಪ್ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಗ್ಯಾಂಗನ್ನು ಬಂಧಿಸಿದ್ದು ಡಾ.ಶಂಕರ್ ಸ್ನೇಹಿತ ನಾಗರಾಜ್ನಿಂದಲೇ ಹನಿಟ್ರ್ಯಾಪ್ ನಡೆದಿರುವುದು ಬೆಳಕಿಗೆ ಬಂದಿದೆ.

2021ರಲ್ಲಿ ಪುತ್ರನಿಗೆ ಮೆಡಿಕಲ್ ಸೀಟ್ ಕೊಡಿಸಲು ಡಾ.ಶಂಕರ್, ನಾಗರಾಜ್ ಮೂಲಕ ಯತ್ನಿಸಿದ್ರು. ₹66 ಲಕ್ಷ ಪಡೆದು ಸೀಟ್ ಕೊಡಿಸುವುದಾಗಿ ನಾಗರಾಜ್ ಹೇಳಿದ್ದ. ಅದರಂತೆಯೇ ಶಂಕರ್ರಿಂದ ಹಂತಹಂತವಾಗಿ ₹66 ಲಕ್ಷ ಪಡೆದಿದ್ದ. ಆದ್ರೆ ಕೊನೆಗೆ ಸೀಟ್ ಕೊಡಿಸಲೇ ಇಲ್ಲ. ಹೀಗಾಗಿ ಪುತ್ರನಿಗೆ ಮೆಡಿಕಲ್ ಸೀಟ್ ಕೊಡಿಸದಿದ್ದರಿಂದ ಡಾ.ಶಂಕರ್ ಹಣ ಕೇಳಿದ್ದ. ಆಗ ನಾಗರಾಜ್ ಹಣ ಕೊಡುತ್ತೇನೆಂದು ಕರೆಸಿ ಬೆಂಗಳೂರಿನ ಉಪ್ಪಾರಪೇಟೆಯ ಲಾಡ್ಜ್ನಲ್ಲಿ ಬುಕ್ ಮಾಡಿ ಇರಿಸಿದ್ದ. ಇದೇ ವೇಳೆ ಡಾ.ಶಂಕರ್ ತಂಗಿದ್ದ ಲಾಡ್ಜ್ ರೂಮ್ಗೆ ಯುವತಿಯರು ಬಂದಿದ್ದಾರೆ. ಕೆಲಹೊತ್ತಿನ ಬಳಿಕ ಲಾಡ್ಜ್ ರೂಮ್ಗೆ ನಕಲಿ ಪೊಲೀಸರು ಕೂಡ ಭೇಟಿ ಕೊಟ್ಟಿದ್ದಾರೆ. ಇಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ದೂರು ಬಂದಿದೆ ಎಂದು ನಕಲಿ ಪೊಲೀಸರು ಡಾ.ಶಂಕರ್ಗೆ ಧಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ತರಬೇತಿ ನಿಲ್ಲಿಸಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಐಎಎಸ್​ ಅಧಿಕಾರಿ ಲಡಾಖ್​ಗೆ ವರ್ಗ, ಪತ್ನಿ ಅರುಣಾಚಲ ಪ್ರದೇಶಕ್ಕೆ

ನಿಮ್ಮ ವಿರುದ್ಧ ಕೇಸ್ ದಾಖಲಿಸದಿರಲು 50 ಲಕ್ಷ ಹಣ ನೀಡಬೇಕು ಎಂದು ಡಾ.ಶಂಕರ್ನಿಂದ 50 ಲಕ್ಷ ಹಣ ಪಡೆದಿದ್ದಾರೆ. ಮತ್ತೆ 50 ಲಕ್ಷ ಹಣ ನೀಡುವಂತೆ ವೈದ್ಯ ಡಾ.ಶಂಕರ್ಗೆ ಒತ್ತಾಯಿಸಿದ್ದಾರೆ. ಲಾಡ್ಜ್ನಲ್ಲಿ ನಿಮ್ಮ ಜತೆಗಿದ್ದ ಯುವತಿಯರ ಜಾಮೀನಿಗೆ ಹಣ ನೀಡಿ. 50 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಹನಿಟ್ರ್ಯಾಪ್ ಹೆಸರಿನಲ್ಲಿ ಸುಲಿಗೆಗೆ ಯತ್ನಿಸಿದವರ ವಿರುದ್ಧ ಡಾ.ಶಂಕರ್ ಪ್ರಕರಣ ದಾಖಲಿಸಿದ್ದಾರೆ. ಡಾ.ಶಂಕರ್ ದೂರಿನ ಆಧಾರದಲ್ಲಿ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈದ್ಯ ಡಾ.ಶಂಕರ್ ಸ್ನೇಹಿತ ನಾಗರಾಜ್ ಸೇರಿದಂತೆ ಮೂವರ ಅರೆಸ್ಟ್ ಆಗಿದ್ದಾರೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್