AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ವೈದ್ಯನನ್ನು ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್; ವೈದ್ಯನ ಸ್ನೇಹಿತ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ

ಡಾ.ಶಂಕರನ್ನು ಹನಿಟ್ರ್ಯಾಪ್ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಗ್ಯಾಂಗನ್ನು ಬಂಧಿಸಿದ್ದು ಡಾ.ಶಂಕರ್ ಸ್ನೇಹಿತ ನಾಗರಾಜ್ನಿಂದಲೇ ಹನಿಟ್ರ್ಯಾಪ್ ನಡೆದಿರುವುದು ಬೆಳಕಿಗೆ ಬಂದಿದೆ.

ಹಣಕ್ಕಾಗಿ ವೈದ್ಯನನ್ನು ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್; ವೈದ್ಯನ ಸ್ನೇಹಿತ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 27, 2022 | 7:58 AM

Share

ಬೆಂಗಳೂರು: ಕಲಬುರಗಿ ವೈದ್ಯನನ್ನು ಹನಿಟ್ರ್ಯಾಪ್(Honey Trap) ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಮೂಲದವರಾದ ವೈದ್ಯ ಡಾ.ಶಂಕರನ್ನು ಹನಿಟ್ರ್ಯಾಪ್ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಗ್ಯಾಂಗನ್ನು ಬಂಧಿಸಿದ್ದು ಡಾ.ಶಂಕರ್ ಸ್ನೇಹಿತ ನಾಗರಾಜ್ನಿಂದಲೇ ಹನಿಟ್ರ್ಯಾಪ್ ನಡೆದಿರುವುದು ಬೆಳಕಿಗೆ ಬಂದಿದೆ.

2021ರಲ್ಲಿ ಪುತ್ರನಿಗೆ ಮೆಡಿಕಲ್ ಸೀಟ್ ಕೊಡಿಸಲು ಡಾ.ಶಂಕರ್, ನಾಗರಾಜ್ ಮೂಲಕ ಯತ್ನಿಸಿದ್ರು. ₹66 ಲಕ್ಷ ಪಡೆದು ಸೀಟ್ ಕೊಡಿಸುವುದಾಗಿ ನಾಗರಾಜ್ ಹೇಳಿದ್ದ. ಅದರಂತೆಯೇ ಶಂಕರ್ರಿಂದ ಹಂತಹಂತವಾಗಿ ₹66 ಲಕ್ಷ ಪಡೆದಿದ್ದ. ಆದ್ರೆ ಕೊನೆಗೆ ಸೀಟ್ ಕೊಡಿಸಲೇ ಇಲ್ಲ. ಹೀಗಾಗಿ ಪುತ್ರನಿಗೆ ಮೆಡಿಕಲ್ ಸೀಟ್ ಕೊಡಿಸದಿದ್ದರಿಂದ ಡಾ.ಶಂಕರ್ ಹಣ ಕೇಳಿದ್ದ. ಆಗ ನಾಗರಾಜ್ ಹಣ ಕೊಡುತ್ತೇನೆಂದು ಕರೆಸಿ ಬೆಂಗಳೂರಿನ ಉಪ್ಪಾರಪೇಟೆಯ ಲಾಡ್ಜ್ನಲ್ಲಿ ಬುಕ್ ಮಾಡಿ ಇರಿಸಿದ್ದ. ಇದೇ ವೇಳೆ ಡಾ.ಶಂಕರ್ ತಂಗಿದ್ದ ಲಾಡ್ಜ್ ರೂಮ್ಗೆ ಯುವತಿಯರು ಬಂದಿದ್ದಾರೆ. ಕೆಲಹೊತ್ತಿನ ಬಳಿಕ ಲಾಡ್ಜ್ ರೂಮ್ಗೆ ನಕಲಿ ಪೊಲೀಸರು ಕೂಡ ಭೇಟಿ ಕೊಟ್ಟಿದ್ದಾರೆ. ಇಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ದೂರು ಬಂದಿದೆ ಎಂದು ನಕಲಿ ಪೊಲೀಸರು ಡಾ.ಶಂಕರ್ಗೆ ಧಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ತರಬೇತಿ ನಿಲ್ಲಿಸಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಐಎಎಸ್​ ಅಧಿಕಾರಿ ಲಡಾಖ್​ಗೆ ವರ್ಗ, ಪತ್ನಿ ಅರುಣಾಚಲ ಪ್ರದೇಶಕ್ಕೆ

ನಿಮ್ಮ ವಿರುದ್ಧ ಕೇಸ್ ದಾಖಲಿಸದಿರಲು 50 ಲಕ್ಷ ಹಣ ನೀಡಬೇಕು ಎಂದು ಡಾ.ಶಂಕರ್ನಿಂದ 50 ಲಕ್ಷ ಹಣ ಪಡೆದಿದ್ದಾರೆ. ಮತ್ತೆ 50 ಲಕ್ಷ ಹಣ ನೀಡುವಂತೆ ವೈದ್ಯ ಡಾ.ಶಂಕರ್ಗೆ ಒತ್ತಾಯಿಸಿದ್ದಾರೆ. ಲಾಡ್ಜ್ನಲ್ಲಿ ನಿಮ್ಮ ಜತೆಗಿದ್ದ ಯುವತಿಯರ ಜಾಮೀನಿಗೆ ಹಣ ನೀಡಿ. 50 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಹನಿಟ್ರ್ಯಾಪ್ ಹೆಸರಿನಲ್ಲಿ ಸುಲಿಗೆಗೆ ಯತ್ನಿಸಿದವರ ವಿರುದ್ಧ ಡಾ.ಶಂಕರ್ ಪ್ರಕರಣ ದಾಖಲಿಸಿದ್ದಾರೆ. ಡಾ.ಶಂಕರ್ ದೂರಿನ ಆಧಾರದಲ್ಲಿ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈದ್ಯ ಡಾ.ಶಂಕರ್ ಸ್ನೇಹಿತ ನಾಗರಾಜ್ ಸೇರಿದಂತೆ ಮೂವರ ಅರೆಸ್ಟ್ ಆಗಿದ್ದಾರೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು