AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ; ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಬಂಧಿಸಿದ ಸಿಸಿಬಿ ಪೊಲೀಸ್

ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್ ಒಂದರಲ್ಲಿ ಇಸ್ಪಿಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ, ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ನೀವು ಪ್ರತಿ ತಿಂಗಳು 50 ಸಾವಿರ ನೀಡಬೇಕು ಎಂದು ಹೇಳಿದ್ದ. ಆದರೆ ಇದಕ್ಕೆ ರಮೇಶ್ ಹಾಗೂ ಶ್ರೀನಿವಾಸ್ ಎಂಬುವರು ಒಪ್ಪಿರಲಿಲ್ಲ.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ; ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಬಂಧಿಸಿದ ಸಿಸಿಬಿ ಪೊಲೀಸ್
ಅಶೋಕ್ ಕುಮಾರ್ ಅಡಿಗ
TV9 Web
| Updated By: ಆಯೇಷಾ ಬಾನು|

Updated on: May 16, 2022 | 6:43 PM

Share

ಬೆಂಗಳೂರು: ಸಿಸಿಬಿ ಪೊಲೀಸರು(CCB Police) ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗರನ್ನ(Ashok Kumar Adiga) ಅರೆಸ್ಟ್ ಮಾಡಿದ್ದಾರೆ. ಬಂಧಿತ ಅಶೋಕ್ ಕುಮಾರ್‌ಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. ಸಿಸಿಬಿ ಪೊಲೀಸರು 14 ದಿನಗಳ ಕಸ್ಟಡಿಗೆ ಕೇಳಿದ್ದರು. ಆದ್ರೆ ಕೋರ್ಟ್‌ 10 ದಿನ ಸಿಸಿಬಿ ಕಸ್ಟಡಿಗೆ ಆದೇಶಿಸಿದೆ. ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಅಶೋಕ್ ಕುಮಾರ್ ಅಡಿಗರನ್ನ ಬಂಧಿಸಲಾಗಿದೆ.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ ಬೆಂಗಳೂರಿನಲ್ಲಿ ಇಸ್ಪಿಟ್ ಕ್ಲಬ್ ನಡೆಸುವ ಬಗ್ಗೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗನ ಮೇಲೆ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ರಮೇಶ್ ಎಂಬುವವರು ಅಶೋಕ್ ಕುಮಾರ್ ಅಡಿಗನ ಮೇಲೆ ನೀಡಿದ ದೂರಿನ ಮೇರೆಗೆ . ಆರ್ಮ್ಸ್ ಆ್ಯಕ್ಟ್ 25,3 ಹಾಗೂ ಐಪಿಸಿ ಸೆಕ್ಷನ್ 384, 420 506b ಅಡಿ ಎಫ್ಐಆರ್ ದಾಖಲಾಗಿದೆ.

ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್ ಒಂದರಲ್ಲಿ ಇಸ್ಪಿಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ, ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ನೀವು ಪ್ರತಿ ತಿಂಗಳು 50 ಸಾವಿರ ನೀಡಬೇಕು ಎಂದು ಹೇಳಿದ್ದ. ಆದರೆ ಇದಕ್ಕೆ ರಮೇಶ್ ಹಾಗೂ ಶ್ರೀನಿವಾಸ್ ಎಂಬುವರು ಒಪ್ಪಿರಲಿಲ್ಲ. ಹೀಗಾಗಿ ತನ್ನ ಸಹಕಾರ ಇಲ್ಲದೆ ಹೇಗೆ ಕ್ಲಬ್ ನಡೆಸುತ್ತೀರಿ ಎಂದು ಅವಾಜ್ ಹಾಕಿದ್ದ. ಅಲ್ಲದೆ ಪಿಸ್ತೂಲ್ ತೋರಿಸಿ ನಾನು ಅರ್ಧ ಗಂಟೆಯಲ್ಲಿ ನಿನ್ನ ಕ್ಲಬ್ ಕ್ಲೋಸ್ ಮಾಡಿಸ್ತಿನಿ ಎಂದು ಶ್ರೀನಿವಾಸ ಬಳಿ 50 ಸಾವಿರ ತೆಗೆದುಕೊಂಡು ಹೋಗಿದ್ದ. ಈ ಹಿನ್ನೆಲೆ ರಮೇಶ್ ಎನ್ನುವವರು ದೂರು ದಾಖಲಿಸಿದ್ದರು. ಸದ್ಯ ಸಿಸಿಬಿ ಪೊಲೀಸರು ಅಶೋಕ್ ಕುಮಾರ್ ಅಡಿಗರನ್ನ ಅರೆಸ್ಟ್ ಮಾಡಿದ್ದು 10 ದಿನಗಳ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಶೋಕ್ ಬಳಿ ಇರುವ ಪಿಸ್ತೂಲ್ಗೆ ಲೈಸೆನ್ಸ್ ಇದೆಯಾ? ಅದು ಇಲ್ಲಿಂದ ಬಂತು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​