AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ; ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಬಂಧಿಸಿದ ಸಿಸಿಬಿ ಪೊಲೀಸ್

ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್ ಒಂದರಲ್ಲಿ ಇಸ್ಪಿಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ, ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ನೀವು ಪ್ರತಿ ತಿಂಗಳು 50 ಸಾವಿರ ನೀಡಬೇಕು ಎಂದು ಹೇಳಿದ್ದ. ಆದರೆ ಇದಕ್ಕೆ ರಮೇಶ್ ಹಾಗೂ ಶ್ರೀನಿವಾಸ್ ಎಂಬುವರು ಒಪ್ಪಿರಲಿಲ್ಲ.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ; ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಬಂಧಿಸಿದ ಸಿಸಿಬಿ ಪೊಲೀಸ್
ಅಶೋಕ್ ಕುಮಾರ್ ಅಡಿಗ
TV9 Web
| Edited By: ಆಯೇಷಾ ಬಾನು|

Updated on: May 16, 2022 | 6:43 PM

Share

ಬೆಂಗಳೂರು: ಸಿಸಿಬಿ ಪೊಲೀಸರು(CCB Police) ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗರನ್ನ(Ashok Kumar Adiga) ಅರೆಸ್ಟ್ ಮಾಡಿದ್ದಾರೆ. ಬಂಧಿತ ಅಶೋಕ್ ಕುಮಾರ್‌ಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. ಸಿಸಿಬಿ ಪೊಲೀಸರು 14 ದಿನಗಳ ಕಸ್ಟಡಿಗೆ ಕೇಳಿದ್ದರು. ಆದ್ರೆ ಕೋರ್ಟ್‌ 10 ದಿನ ಸಿಸಿಬಿ ಕಸ್ಟಡಿಗೆ ಆದೇಶಿಸಿದೆ. ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಅಶೋಕ್ ಕುಮಾರ್ ಅಡಿಗರನ್ನ ಬಂಧಿಸಲಾಗಿದೆ.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 50 ಸಾವಿರ ವಸೂಲಿ ಬೆಂಗಳೂರಿನಲ್ಲಿ ಇಸ್ಪಿಟ್ ಕ್ಲಬ್ ನಡೆಸುವ ಬಗ್ಗೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗನ ಮೇಲೆ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ರಮೇಶ್ ಎಂಬುವವರು ಅಶೋಕ್ ಕುಮಾರ್ ಅಡಿಗನ ಮೇಲೆ ನೀಡಿದ ದೂರಿನ ಮೇರೆಗೆ . ಆರ್ಮ್ಸ್ ಆ್ಯಕ್ಟ್ 25,3 ಹಾಗೂ ಐಪಿಸಿ ಸೆಕ್ಷನ್ 384, 420 506b ಅಡಿ ಎಫ್ಐಆರ್ ದಾಖಲಾಗಿದೆ.

ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್ ಒಂದರಲ್ಲಿ ಇಸ್ಪಿಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ, ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ನೀವು ಪ್ರತಿ ತಿಂಗಳು 50 ಸಾವಿರ ನೀಡಬೇಕು ಎಂದು ಹೇಳಿದ್ದ. ಆದರೆ ಇದಕ್ಕೆ ರಮೇಶ್ ಹಾಗೂ ಶ್ರೀನಿವಾಸ್ ಎಂಬುವರು ಒಪ್ಪಿರಲಿಲ್ಲ. ಹೀಗಾಗಿ ತನ್ನ ಸಹಕಾರ ಇಲ್ಲದೆ ಹೇಗೆ ಕ್ಲಬ್ ನಡೆಸುತ್ತೀರಿ ಎಂದು ಅವಾಜ್ ಹಾಕಿದ್ದ. ಅಲ್ಲದೆ ಪಿಸ್ತೂಲ್ ತೋರಿಸಿ ನಾನು ಅರ್ಧ ಗಂಟೆಯಲ್ಲಿ ನಿನ್ನ ಕ್ಲಬ್ ಕ್ಲೋಸ್ ಮಾಡಿಸ್ತಿನಿ ಎಂದು ಶ್ರೀನಿವಾಸ ಬಳಿ 50 ಸಾವಿರ ತೆಗೆದುಕೊಂಡು ಹೋಗಿದ್ದ. ಈ ಹಿನ್ನೆಲೆ ರಮೇಶ್ ಎನ್ನುವವರು ದೂರು ದಾಖಲಿಸಿದ್ದರು. ಸದ್ಯ ಸಿಸಿಬಿ ಪೊಲೀಸರು ಅಶೋಕ್ ಕುಮಾರ್ ಅಡಿಗರನ್ನ ಅರೆಸ್ಟ್ ಮಾಡಿದ್ದು 10 ದಿನಗಳ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಶೋಕ್ ಬಳಿ ಇರುವ ಪಿಸ್ತೂಲ್ಗೆ ಲೈಸೆನ್ಸ್ ಇದೆಯಾ? ಅದು ಇಲ್ಲಿಂದ ಬಂತು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ