ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಬಿಜೆಪಿ ಯುವ ಮೂರ್ಚಾ ಕಾರ್ಯಕರ್ತನ ಬಂಧನ

Cheating Case: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 4 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Follow us
| Updated By: ವಿವೇಕ ಬಿರಾದಾರ

Updated on:Sep 13, 2023 | 9:43 AM

ಬೆಂಗಳೂರು ಸೆ.13: ಬೆಂಗಳೂರು ಸೆ.13: ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ (Hindu Activist) ಚೈತ್ರಾ ಕುಂದಾಪುರ (Chaitra Kundapur) ಅವರನ್ನು ಸಿಸಿಬಿ‌ ಪೊಲೀಸರು (CCB Police) ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್​ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಇದನ್ನೂ ಓದಿ: ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಗೋವಿಂದಬಾಬು ಬೆಂಗಳೂರಿಗೆ ಬಂದಾಗಲೆಲ್ಲ, ಚೈತ್ರಾ ಕುಂದಾಪುರ ತನ್ನ ಪರಿಚಯಸ್ತರಿಗೆ ಒಳ್ಳೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್​​ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಟ್ಟಿದ್ದರು.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಬಂಧನ

ಇನ್ನು ಪ್ರಕರಣದ ಎ2 ಆರೋಪಿ, ಕಡೂರು ಮೂಲದ‌ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಗಗನ್ ಕಡೂರು ಎಂಬುವರನ್ನು ಪೊಲೀಸರು ಬಂಧಸಿದ್ದಾರೆ. ಗಗನ್ ಕಡೂರು ಜೈತ್ರ ಕುಂದಾಪುರ ಆಪ್ತನಾಗಿದ್ದಾನೆ. ದೂರು ದಾಖಲಾಗುತ್ತಿದ್ದಂತೆ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಿ ಚಿಕ್ಕಮಗಳೂರು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಆದೇಶ ಹೊರಡಿಸಿದ್ದಾರೆ. ಗೋವಿಂದಬಾಬು ಒಂದು ತಿಂಗಳ ಹಿಂದೆಯೇ ಗಗನ್ ಬಗ್ಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Wed, 13 September 23

ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು