AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​

ನಗರದಲ್ಲಿ ನಕಲಿ ಮಾರ್ಕ್ಸ್ ಕಾರ್ಡ್​ ದಂಧೆ ಜೋರಾಗಿದ್ದು, ಇದೀಗ ಸಿಸಿಬಿ ಪೊಲೀಸರು 5 ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​
ಸಾಂದರ್ಭೀಕ ಚಿತ್ರ
TV9 Web
| Edited By: |

Updated on:Jan 27, 2023 | 1:12 PM

Share

ಬೆಂಗಳೂರು: ನಗರದಲ್ಲಿ ಮುಂದುವರೆದ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ, ಇಂದು(.27) ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಐದು ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ದಂಧೆ ಮಾಡುತ್ತಿರುವುದು ಪತ್ತೆಯಾಗಿದ್ದು, 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳನ್ನ ಸೇರಿ ಕೃತ್ಯಕ್ಕೆ ಬಳಸಿದ್ದ ಟೆಕ್ನಿಕಲ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಆರೋಪಿ ವಿಕಾಸ್​ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ, ಕುವೆಂಪು ಯೂನಿವರ್ಸಿಟಿ, ಜೈನ್ ವಿಹಾರ್ ಯೂನಿವರ್ಸಿಟಿ ಸೇರಿದಂತೆ 15 ಕ್ಕೂ ಹೆಚ್ಚು ಯೂನಿವರ್ಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವ್ಯಕ್ತಿಯನ್ನ ಇದೀಗ ಬಂಧಿಸಿದ್ದಾರೆ. ಈ ಹಿಂದೆ ಕೂಡ ಇಂತಹ ಅನೇಕ ನಕಲಿ ಮಾರ್ಕ್ಸ್ ಜಾಲವನ್ನ ಸಿಸಿಬಿ ಪೊಲೀಸರು ಭೇಧಿಸಿದ್ದರು. ಆದರೂ ಈವರೆಗೆ ಇಂತಹ ಕೃತ್ಯಗಳು ಹೊರಬರುತ್ತಲೇ ಇದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಆರ್​.ಡಿ.ಪಾಟೀಲ್ ಬೆಂಬಲಿಗರಿಂದ ಮತ್ತೊಂದು ಆಡಿಯೋ ರಿಲೀಸ್​

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಅಕ್ರಮದ ಕಿಂಗ್ ಪಿನ್ ಆರ್​.ಡಿ.ಪಾಟೀಲ್ ಇಂದ ಮತ್ತೊಂದು ಆಡಿಯೋ ರಿಲೀಸ್​ ಆಗಿದೆ. ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಮೂರು ಜನ ಸಿಐಡಿ ಡಿ ವೈ ಎಸ್ ಪಿ ಗಳು ಪ್ರಕಾಶ್ ರಾಠೋಡ್ , ವಿರೇಂದ್ರ , ಶಂಕರಗೌಡ ಈ ಮೂರು ಜನ ಅಧಿಕಾರಿಗಳ ಹಣದ ಪಾಲಿನ ಬಗ್ಗೆ ಮಾತಾಡಿರುವ ಆಡಿಯೋ ಇದೀಗ ವೈರಲ್​ ಆಗಿದೆ.

ಇದನ್ನೂ ಓದಿ:ಬೆಂಗಳೂರು: ಯೂಟ್ಯೂಬ್​ ನೋಡಿ ನಕಲಿ ನೋಟು ತಯಾರಿ ಮಾಡುತ್ತಿದ್ದವನನ್ನ ಬಂಧಿಸಿದ ಪೊಲೀಸರು

ಆಡಿಯೋದಲ್ಲಿ ಎನಿದೆ?

ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಕಾಶಿನಾಥ್‌ ಹಾಗೂ ಸಿಐಡಿ DySP ಶಂಕರಗೌಡ ಮಾತಾಡಿದ್ದಾರೆನ್ನುವ ಈ ಆಡಿಯೋದಲ್ಲಿ ಇಬ್ಬರ ಸಂಭಾಷಣೆಯ ವೇಳೆ ಮತ್ತಿಬ್ಬರು ತನಿಖಾಧಿಕಾರಿಗಳಾದ ಪ್ರಕಾಶ್ ರಾಠೋಡ್ ಮತ್ತು ವೀರೇಂದ್ರ ಹೆಸರು ಉಲ್ಲೇಖವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಮೂವರು ಸಿಐಡಿ ಡಿವೈಎಸ್​​ಪಿಗಳು ಇವರಾಗಿದ್ದು ಹಣದ ಪಾಲಿನ ಬಗ್ಗೆ ಈ ಆಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Fri, 27 January 23

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ