AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​

ನಗರದಲ್ಲಿ ನಕಲಿ ಮಾರ್ಕ್ಸ್ ಕಾರ್ಡ್​ ದಂಧೆ ಜೋರಾಗಿದ್ದು, ಇದೀಗ ಸಿಸಿಬಿ ಪೊಲೀಸರು 5 ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​
ಸಾಂದರ್ಭೀಕ ಚಿತ್ರ
TV9 Web
| Edited By: |

Updated on:Jan 27, 2023 | 1:12 PM

Share

ಬೆಂಗಳೂರು: ನಗರದಲ್ಲಿ ಮುಂದುವರೆದ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ, ಇಂದು(.27) ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಐದು ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ದಂಧೆ ಮಾಡುತ್ತಿರುವುದು ಪತ್ತೆಯಾಗಿದ್ದು, 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳನ್ನ ಸೇರಿ ಕೃತ್ಯಕ್ಕೆ ಬಳಸಿದ್ದ ಟೆಕ್ನಿಕಲ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಆರೋಪಿ ವಿಕಾಸ್​ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ, ಕುವೆಂಪು ಯೂನಿವರ್ಸಿಟಿ, ಜೈನ್ ವಿಹಾರ್ ಯೂನಿವರ್ಸಿಟಿ ಸೇರಿದಂತೆ 15 ಕ್ಕೂ ಹೆಚ್ಚು ಯೂನಿವರ್ಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವ್ಯಕ್ತಿಯನ್ನ ಇದೀಗ ಬಂಧಿಸಿದ್ದಾರೆ. ಈ ಹಿಂದೆ ಕೂಡ ಇಂತಹ ಅನೇಕ ನಕಲಿ ಮಾರ್ಕ್ಸ್ ಜಾಲವನ್ನ ಸಿಸಿಬಿ ಪೊಲೀಸರು ಭೇಧಿಸಿದ್ದರು. ಆದರೂ ಈವರೆಗೆ ಇಂತಹ ಕೃತ್ಯಗಳು ಹೊರಬರುತ್ತಲೇ ಇದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಆರ್​.ಡಿ.ಪಾಟೀಲ್ ಬೆಂಬಲಿಗರಿಂದ ಮತ್ತೊಂದು ಆಡಿಯೋ ರಿಲೀಸ್​

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಅಕ್ರಮದ ಕಿಂಗ್ ಪಿನ್ ಆರ್​.ಡಿ.ಪಾಟೀಲ್ ಇಂದ ಮತ್ತೊಂದು ಆಡಿಯೋ ರಿಲೀಸ್​ ಆಗಿದೆ. ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಮೂರು ಜನ ಸಿಐಡಿ ಡಿ ವೈ ಎಸ್ ಪಿ ಗಳು ಪ್ರಕಾಶ್ ರಾಠೋಡ್ , ವಿರೇಂದ್ರ , ಶಂಕರಗೌಡ ಈ ಮೂರು ಜನ ಅಧಿಕಾರಿಗಳ ಹಣದ ಪಾಲಿನ ಬಗ್ಗೆ ಮಾತಾಡಿರುವ ಆಡಿಯೋ ಇದೀಗ ವೈರಲ್​ ಆಗಿದೆ.

ಇದನ್ನೂ ಓದಿ:ಬೆಂಗಳೂರು: ಯೂಟ್ಯೂಬ್​ ನೋಡಿ ನಕಲಿ ನೋಟು ತಯಾರಿ ಮಾಡುತ್ತಿದ್ದವನನ್ನ ಬಂಧಿಸಿದ ಪೊಲೀಸರು

ಆಡಿಯೋದಲ್ಲಿ ಎನಿದೆ?

ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಕಾಶಿನಾಥ್‌ ಹಾಗೂ ಸಿಐಡಿ DySP ಶಂಕರಗೌಡ ಮಾತಾಡಿದ್ದಾರೆನ್ನುವ ಈ ಆಡಿಯೋದಲ್ಲಿ ಇಬ್ಬರ ಸಂಭಾಷಣೆಯ ವೇಳೆ ಮತ್ತಿಬ್ಬರು ತನಿಖಾಧಿಕಾರಿಗಳಾದ ಪ್ರಕಾಶ್ ರಾಠೋಡ್ ಮತ್ತು ವೀರೇಂದ್ರ ಹೆಸರು ಉಲ್ಲೇಖವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಮೂವರು ಸಿಐಡಿ ಡಿವೈಎಸ್​​ಪಿಗಳು ಇವರಾಗಿದ್ದು ಹಣದ ಪಾಲಿನ ಬಗ್ಗೆ ಈ ಆಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Fri, 27 January 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ