AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು
ಕೇಂದ್ರ ಅಪರಾಧ ವಿಭಾಗ
TV9 Web
| Updated By: ವಿವೇಕ ಬಿರಾದಾರ|

Updated on:Jul 01, 2022 | 3:40 PM

Share

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bngaluru) ಸಿಸಿಬಿ ಪೊಲೀಸರು (CCB Police) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅನಾರೋಗ್ಯದಿಂದ ಬೇಸತ್ತು ಮೂರೂವರೆ ವರ್ಷದ ಪುತ್ರಿ ಕೊಂದು ತಾನು ನೇಣಿಗೆ ಶರಣಾದ ತಾಯಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಜುಲೈ 8 ರವರೆಗೆ  ಅವಕಾಶ

ಇನ್ನೂ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಬಿಬಿಎಂಪಿ ಚುನಾವಣೆಯಲ್ಲಿ 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ವಾರ್ಡ್ ವಿಂಗಡಣೆಗಳ ಕುರಿತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಮಾತನಾಡಿ ನಮಗೆ ಹೆಂಗೆ ಬೇಕೋ ಹಂಗೆ ಮುಖ್ಯಮಂತ್ರಿ ಗಳು ವಾರ್ಡ್​​ಗಳನ್ನು ಮರು ವಿಂಗಡಣೆ ಮಾಡಿದ್ದಾರೆ. ಆದರೆ ಇಲ್ಲಿ ಗೆಲ್ಲಿಸೋದು ನಮ್ಮ ಕರ್ತವ್ಯ. 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ವನ್ನು ಬೊಮ್ಮಾಯಿ ಅವರು ಕೊಡುತ್ತಾರೆ ಎಂದರು.

ಇದನ್ನು ಓದಿ: ಕೆರೆಗಳಿಗೆ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು: ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿಯ ಅನ್ನದಾತರು

ಮೇ 20 ರಂದು ಸುಪ್ರೀಂ ಕೋರ್ಟ್​ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಲಾಗಿದೆ.

Published On - 3:15 pm, Fri, 1 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ