AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು
ಕೇಂದ್ರ ಅಪರಾಧ ವಿಭಾಗ
TV9 Web
| Edited By: ವಿವೇಕ ಬಿರಾದಾರ|

Updated on:Jul 01, 2022 | 3:40 PM

Share

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bngaluru) ಸಿಸಿಬಿ ಪೊಲೀಸರು (CCB Police) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅನಾರೋಗ್ಯದಿಂದ ಬೇಸತ್ತು ಮೂರೂವರೆ ವರ್ಷದ ಪುತ್ರಿ ಕೊಂದು ತಾನು ನೇಣಿಗೆ ಶರಣಾದ ತಾಯಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಜುಲೈ 8 ರವರೆಗೆ  ಅವಕಾಶ

ಇನ್ನೂ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಬಿಬಿಎಂಪಿ ಚುನಾವಣೆಯಲ್ಲಿ 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ವಾರ್ಡ್ ವಿಂಗಡಣೆಗಳ ಕುರಿತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಮಾತನಾಡಿ ನಮಗೆ ಹೆಂಗೆ ಬೇಕೋ ಹಂಗೆ ಮುಖ್ಯಮಂತ್ರಿ ಗಳು ವಾರ್ಡ್​​ಗಳನ್ನು ಮರು ವಿಂಗಡಣೆ ಮಾಡಿದ್ದಾರೆ. ಆದರೆ ಇಲ್ಲಿ ಗೆಲ್ಲಿಸೋದು ನಮ್ಮ ಕರ್ತವ್ಯ. 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ವನ್ನು ಬೊಮ್ಮಾಯಿ ಅವರು ಕೊಡುತ್ತಾರೆ ಎಂದರು.

ಇದನ್ನು ಓದಿ: ಕೆರೆಗಳಿಗೆ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು: ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿಯ ಅನ್ನದಾತರು

ಮೇ 20 ರಂದು ಸುಪ್ರೀಂ ಕೋರ್ಟ್​ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಲಾಗಿದೆ.

Published On - 3:15 pm, Fri, 1 July 22

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು