AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು
ಕೇಂದ್ರ ಅಪರಾಧ ವಿಭಾಗ
TV9 Web
| Edited By: ವಿವೇಕ ಬಿರಾದಾರ|

Updated on:Jul 01, 2022 | 3:40 PM

Share

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bngaluru) ಸಿಸಿಬಿ ಪೊಲೀಸರು (CCB Police) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅನಾರೋಗ್ಯದಿಂದ ಬೇಸತ್ತು ಮೂರೂವರೆ ವರ್ಷದ ಪುತ್ರಿ ಕೊಂದು ತಾನು ನೇಣಿಗೆ ಶರಣಾದ ತಾಯಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಜುಲೈ 8 ರವರೆಗೆ  ಅವಕಾಶ

ಇನ್ನೂ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಬಿಬಿಎಂಪಿ ಚುನಾವಣೆಯಲ್ಲಿ 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ವಾರ್ಡ್ ವಿಂಗಡಣೆಗಳ ಕುರಿತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಮಾತನಾಡಿ ನಮಗೆ ಹೆಂಗೆ ಬೇಕೋ ಹಂಗೆ ಮುಖ್ಯಮಂತ್ರಿ ಗಳು ವಾರ್ಡ್​​ಗಳನ್ನು ಮರು ವಿಂಗಡಣೆ ಮಾಡಿದ್ದಾರೆ. ಆದರೆ ಇಲ್ಲಿ ಗೆಲ್ಲಿಸೋದು ನಮ್ಮ ಕರ್ತವ್ಯ. 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ವನ್ನು ಬೊಮ್ಮಾಯಿ ಅವರು ಕೊಡುತ್ತಾರೆ ಎಂದರು.

ಇದನ್ನು ಓದಿ: ಕೆರೆಗಳಿಗೆ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು: ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿಯ ಅನ್ನದಾತರು

ಮೇ 20 ರಂದು ಸುಪ್ರೀಂ ಕೋರ್ಟ್​ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಲಾಗಿದೆ.

Published On - 3:15 pm, Fri, 1 July 22

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ