AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು
ಕೇಂದ್ರ ಅಪರಾಧ ವಿಭಾಗ
TV9 Web
| Edited By: ವಿವೇಕ ಬಿರಾದಾರ|

Updated on:Jul 01, 2022 | 3:40 PM

Share

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bngaluru) ಸಿಸಿಬಿ ಪೊಲೀಸರು (CCB Police) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅನಾರೋಗ್ಯದಿಂದ ಬೇಸತ್ತು ಮೂರೂವರೆ ವರ್ಷದ ಪುತ್ರಿ ಕೊಂದು ತಾನು ನೇಣಿಗೆ ಶರಣಾದ ತಾಯಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಜುಲೈ 8 ರವರೆಗೆ  ಅವಕಾಶ

ಇನ್ನೂ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಬಿಬಿಎಂಪಿ ಚುನಾವಣೆಯಲ್ಲಿ 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ವಾರ್ಡ್ ವಿಂಗಡಣೆಗಳ ಕುರಿತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಮಾತನಾಡಿ ನಮಗೆ ಹೆಂಗೆ ಬೇಕೋ ಹಂಗೆ ಮುಖ್ಯಮಂತ್ರಿ ಗಳು ವಾರ್ಡ್​​ಗಳನ್ನು ಮರು ವಿಂಗಡಣೆ ಮಾಡಿದ್ದಾರೆ. ಆದರೆ ಇಲ್ಲಿ ಗೆಲ್ಲಿಸೋದು ನಮ್ಮ ಕರ್ತವ್ಯ. 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ವನ್ನು ಬೊಮ್ಮಾಯಿ ಅವರು ಕೊಡುತ್ತಾರೆ ಎಂದರು.

ಇದನ್ನು ಓದಿ: ಕೆರೆಗಳಿಗೆ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು: ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿಯ ಅನ್ನದಾತರು

ಮೇ 20 ರಂದು ಸುಪ್ರೀಂ ಕೋರ್ಟ್​ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಲಾಗಿದೆ.

Published On - 3:15 pm, Fri, 1 July 22

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್