Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ

ಕರ್ನಾಟಕದ ಲೇಖಕರು, ಚಿಂತಕರು ಹಾಗೂ ಸಾಹಿತಿಗಳಿಗೆ ನಿದ್ದೆಗೆಡಿಸಿದ್ದ ಕೊಲೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಿಸಿಬಿ ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದ್ದು, ಅಲ್ಲದೇ ಆ ವ್ಯಕ್ತಿ ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಬಲೆ ಬೀಸಿದೆ.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ
ಸಿಎಂ ಭೇಟಿಯಾಗಿದ್ದ ಸಾಹಿತಿಗಳು
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on: Aug 29, 2023 | 12:05 PM

ಬೆಂಗಳೂರು, (ಆಗಸ್ಟ್ 29): ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಕೊಲೆ ಬೆದರಿಕೆ (life threatening)ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದು, ಸಿಸಿಬಿ (CCB) ಅಧಿಕಾರಿಗಳ ತನಿಖೆಯಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ದಾವಣಗೆರೆ ಮೂಲದಿಂದ ಬೆದರಿಕೆ ಪತ್ರ ಬಂದಿರುವುದು ಖಚಿತವಾಗಿದ್ದು, ಒಬ್ಬನೇ ಪತ್ರ ಬರೆದು ಬೇರೆ ಬೇರೆ ಜಿಲ್ಲೆ, ತಾಲೂಕುಗಳಿಗೆ ಹೋಗಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಲೇಖಕರು ಹಾಗೂ ಸಾಹಿತಿಗಳು ಸೇರಿದಂತೆ ಒಟ್ಟು ಹದಿನೈದಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ(scholar) ಜೀವ ಬೆದರಿಕೆ(life threatening) ಹಾಕಲಾಗಿದೆ. ಪ್ರೊ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಬಳಿಕ ಈಗ ಮತ್ತೆ ಕಳೆದೊಂದು ವರ್ಷದಿಂದ ಸಾಹಿತಿ, ಲೇಖಕರಿಗೆ ಜೀವ ಬೆದರಿಕೆ ಬಂದಿರುವುದು ಬುದ್ಧಿಜೀವಿಗಳು ಆತಂಕಗೊಂಡಿದ್ದಾರೆ. ಕೋಮುವಾದ, ಜಾತಿವಾದ, ಮೌಡ್ಯವಿರೋಧಿ ನಿಲುವುಳ್ಳ ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇದರಿಂದ , ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಮಾನಸಿಕ ಹಿಂಸೆಗೊಳಗಾಗಿದ್ದು, ಯಾವ ಸಂದರ್ಭದಲ್ಲಾದರೂ ತಮ್ಮ ಮೇಲೆ ದಾಳಿಯಾಗಬಹುದು ಎನ್ನುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಹಿತಿ, ಲೇಖಕರು ತಮಗೆ ರಕ್ಷಣೆ ನೀಡಬೇಕೆಂದು ಸರ್ಕಾರದ ಮೊರೆ ಹೋಗಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಕೆ. ಮರುಳಸಿದ್ದಪ್ಪ ನೇತೃತ್ವದಲ್ಲಿ ಪರಮೇಶ್ವರ ಅವರನ್ನು ಮೊನ್ನೇ ಅಷ್ಟೇ ಭೇಟಿ ಮಾಡಿದ್ದ ಸಾಹಿತಿಗಳು, ನಿರಂತರವಾಗಿ ಬೆದರಿಕೆ ಕರೆಗಳು ಮತ್ತು ಪತ್ರಗಳು ಬರುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಈ ಕುರಿತು ಗೃಹ ಸಚಿವರು ವಿವರವಾಗಿ ಮಾಹಿತಿ ಪಡೆದುಕೊಂಡು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ