AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ

ಕರ್ನಾಟಕದ ಲೇಖಕರು, ಚಿಂತಕರು ಹಾಗೂ ಸಾಹಿತಿಗಳಿಗೆ ನಿದ್ದೆಗೆಡಿಸಿದ್ದ ಕೊಲೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಿಸಿಬಿ ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದ್ದು, ಅಲ್ಲದೇ ಆ ವ್ಯಕ್ತಿ ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಬಲೆ ಬೀಸಿದೆ.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ
ಸಿಎಂ ಭೇಟಿಯಾಗಿದ್ದ ಸಾಹಿತಿಗಳು
Shivaprasad B
| Edited By: |

Updated on: Aug 29, 2023 | 12:05 PM

Share

ಬೆಂಗಳೂರು, (ಆಗಸ್ಟ್ 29): ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಕೊಲೆ ಬೆದರಿಕೆ (life threatening)ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದು, ಸಿಸಿಬಿ (CCB) ಅಧಿಕಾರಿಗಳ ತನಿಖೆಯಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ದಾವಣಗೆರೆ ಮೂಲದಿಂದ ಬೆದರಿಕೆ ಪತ್ರ ಬಂದಿರುವುದು ಖಚಿತವಾಗಿದ್ದು, ಒಬ್ಬನೇ ಪತ್ರ ಬರೆದು ಬೇರೆ ಬೇರೆ ಜಿಲ್ಲೆ, ತಾಲೂಕುಗಳಿಗೆ ಹೋಗಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಲೇಖಕರು ಹಾಗೂ ಸಾಹಿತಿಗಳು ಸೇರಿದಂತೆ ಒಟ್ಟು ಹದಿನೈದಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ(scholar) ಜೀವ ಬೆದರಿಕೆ(life threatening) ಹಾಕಲಾಗಿದೆ. ಪ್ರೊ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಬಳಿಕ ಈಗ ಮತ್ತೆ ಕಳೆದೊಂದು ವರ್ಷದಿಂದ ಸಾಹಿತಿ, ಲೇಖಕರಿಗೆ ಜೀವ ಬೆದರಿಕೆ ಬಂದಿರುವುದು ಬುದ್ಧಿಜೀವಿಗಳು ಆತಂಕಗೊಂಡಿದ್ದಾರೆ. ಕೋಮುವಾದ, ಜಾತಿವಾದ, ಮೌಡ್ಯವಿರೋಧಿ ನಿಲುವುಳ್ಳ ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇದರಿಂದ , ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಮಾನಸಿಕ ಹಿಂಸೆಗೊಳಗಾಗಿದ್ದು, ಯಾವ ಸಂದರ್ಭದಲ್ಲಾದರೂ ತಮ್ಮ ಮೇಲೆ ದಾಳಿಯಾಗಬಹುದು ಎನ್ನುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಹಿತಿ, ಲೇಖಕರು ತಮಗೆ ರಕ್ಷಣೆ ನೀಡಬೇಕೆಂದು ಸರ್ಕಾರದ ಮೊರೆ ಹೋಗಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಕೆ. ಮರುಳಸಿದ್ದಪ್ಪ ನೇತೃತ್ವದಲ್ಲಿ ಪರಮೇಶ್ವರ ಅವರನ್ನು ಮೊನ್ನೇ ಅಷ್ಟೇ ಭೇಟಿ ಮಾಡಿದ್ದ ಸಾಹಿತಿಗಳು, ನಿರಂತರವಾಗಿ ಬೆದರಿಕೆ ಕರೆಗಳು ಮತ್ತು ಪತ್ರಗಳು ಬರುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಈ ಕುರಿತು ಗೃಹ ಸಚಿವರು ವಿವರವಾಗಿ ಮಾಹಿತಿ ಪಡೆದುಕೊಂಡು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?