AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ

ಕರ್ನಾಟಕದ ಲೇಖಕರು, ಚಿಂತಕರು ಹಾಗೂ ಸಾಹಿತಿಗಳಿಗೆ ನಿದ್ದೆಗೆಡಿಸಿದ್ದ ಕೊಲೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಿಸಿಬಿ ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದ್ದು, ಅಲ್ಲದೇ ಆ ವ್ಯಕ್ತಿ ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಬಲೆ ಬೀಸಿದೆ.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ
ಸಿಎಂ ಭೇಟಿಯಾಗಿದ್ದ ಸಾಹಿತಿಗಳು
ಶಿವಪ್ರಸಾದ್​ ಬಿ.
| Edited By: |

Updated on: Aug 29, 2023 | 12:05 PM

Share

ಬೆಂಗಳೂರು, (ಆಗಸ್ಟ್ 29): ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಕೊಲೆ ಬೆದರಿಕೆ (life threatening)ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದು, ಸಿಸಿಬಿ (CCB) ಅಧಿಕಾರಿಗಳ ತನಿಖೆಯಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ದಾವಣಗೆರೆ ಮೂಲದಿಂದ ಬೆದರಿಕೆ ಪತ್ರ ಬಂದಿರುವುದು ಖಚಿತವಾಗಿದ್ದು, ಒಬ್ಬನೇ ಪತ್ರ ಬರೆದು ಬೇರೆ ಬೇರೆ ಜಿಲ್ಲೆ, ತಾಲೂಕುಗಳಿಗೆ ಹೋಗಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಲೇಖಕರು ಹಾಗೂ ಸಾಹಿತಿಗಳು ಸೇರಿದಂತೆ ಒಟ್ಟು ಹದಿನೈದಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ(scholar) ಜೀವ ಬೆದರಿಕೆ(life threatening) ಹಾಕಲಾಗಿದೆ. ಪ್ರೊ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಬಳಿಕ ಈಗ ಮತ್ತೆ ಕಳೆದೊಂದು ವರ್ಷದಿಂದ ಸಾಹಿತಿ, ಲೇಖಕರಿಗೆ ಜೀವ ಬೆದರಿಕೆ ಬಂದಿರುವುದು ಬುದ್ಧಿಜೀವಿಗಳು ಆತಂಕಗೊಂಡಿದ್ದಾರೆ. ಕೋಮುವಾದ, ಜಾತಿವಾದ, ಮೌಡ್ಯವಿರೋಧಿ ನಿಲುವುಳ್ಳ ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇದರಿಂದ , ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಮಾನಸಿಕ ಹಿಂಸೆಗೊಳಗಾಗಿದ್ದು, ಯಾವ ಸಂದರ್ಭದಲ್ಲಾದರೂ ತಮ್ಮ ಮೇಲೆ ದಾಳಿಯಾಗಬಹುದು ಎನ್ನುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಹಿತಿ, ಲೇಖಕರು ತಮಗೆ ರಕ್ಷಣೆ ನೀಡಬೇಕೆಂದು ಸರ್ಕಾರದ ಮೊರೆ ಹೋಗಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಕೆ. ಮರುಳಸಿದ್ದಪ್ಪ ನೇತೃತ್ವದಲ್ಲಿ ಪರಮೇಶ್ವರ ಅವರನ್ನು ಮೊನ್ನೇ ಅಷ್ಟೇ ಭೇಟಿ ಮಾಡಿದ್ದ ಸಾಹಿತಿಗಳು, ನಿರಂತರವಾಗಿ ಬೆದರಿಕೆ ಕರೆಗಳು ಮತ್ತು ಪತ್ರಗಳು ಬರುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಈ ಕುರಿತು ಗೃಹ ಸಚಿವರು ವಿವರವಾಗಿ ಮಾಹಿತಿ ಪಡೆದುಕೊಂಡು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ