AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ

ಸಿಸಿಬಿ ದಾಳಿ ವೇಳೆ ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ವಿಜಯನಗರ ರೌಡಿಶೀಟರ್ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್​ಗಳು ಪತ್ತೆಯಾಗಿವೆ.

ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ
ರೌಡಿಶೀಟರ್ ಸ್ಟಾರ್​ ನವೀನ್
TV9 Web
| Edited By: ಆಯೇಷಾ ಬಾನು|

Updated on:Nov 23, 2022 | 10:20 AM

Share

ಬೆಂಗಳೂರು: ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆ

ಸಿಸಿಬಿ ದಾಳಿ ವೇಳೆ ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಳ್ಳ ರಿಜ್ವಾನ್​​ ಶಿಷ್ಯ ಸ್ಟಾರ್​ ನವೀನ್​ ಮನೆಯಲ್ಲಿ ಡ್ಯಾಗರ್​​ ಪತ್ತೆಯಾಗಿದ್ದು ಸಿಸಿಬಿ ದಾಳಿ ವೇಳೆ ಸ್ಟಾರ್ ನವೀನ್​​​​ ಎಸ್ಕೇಪ್ ಆಗಿದ್ದಾನೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲೂ ಸಿಸಿಬಿ ದಾಳಿ ನಡೆದಿ ಪರಿಶೀಲನೆ ನಡೆಸಿದೆ. ಈ ವೇಳೆ ವಿಜಯನಗರ ರೌಡಿಶೀಟರ್ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್​ಗಳು ಪತ್ತೆಯಾಗಿವೆ.

ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್ ಅರೆಸ್ಟ್

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರೌಡಿಶೀಟರ್​​ ಪೃಥ್ವಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

​ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:01 am, Wed, 23 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ