AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ

ಸಿಸಿಬಿ ದಾಳಿ ವೇಳೆ ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ವಿಜಯನಗರ ರೌಡಿಶೀಟರ್ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್​ಗಳು ಪತ್ತೆಯಾಗಿವೆ.

ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ
ರೌಡಿಶೀಟರ್ ಸ್ಟಾರ್​ ನವೀನ್
TV9 Web
| Edited By: |

Updated on:Nov 23, 2022 | 10:20 AM

Share

ಬೆಂಗಳೂರು: ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆ

ಸಿಸಿಬಿ ದಾಳಿ ವೇಳೆ ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಳ್ಳ ರಿಜ್ವಾನ್​​ ಶಿಷ್ಯ ಸ್ಟಾರ್​ ನವೀನ್​ ಮನೆಯಲ್ಲಿ ಡ್ಯಾಗರ್​​ ಪತ್ತೆಯಾಗಿದ್ದು ಸಿಸಿಬಿ ದಾಳಿ ವೇಳೆ ಸ್ಟಾರ್ ನವೀನ್​​​​ ಎಸ್ಕೇಪ್ ಆಗಿದ್ದಾನೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲೂ ಸಿಸಿಬಿ ದಾಳಿ ನಡೆದಿ ಪರಿಶೀಲನೆ ನಡೆಸಿದೆ. ಈ ವೇಳೆ ವಿಜಯನಗರ ರೌಡಿಶೀಟರ್ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್​ಗಳು ಪತ್ತೆಯಾಗಿವೆ.

ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್ ಅರೆಸ್ಟ್

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರೌಡಿಶೀಟರ್​​ ಪೃಥ್ವಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

​ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:01 am, Wed, 23 November 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್