AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​

ರಾಜಧಾನಿ ಬೆಂಗಳೂರಲ್ಲಿಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು 5.5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳು ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಡ್ರಗ್ ಪೆಡ್ಲಿಂಗ್​ನಲ್ಲಿ ತೊಡಗಿರೋದು ತನಿಖೆ ವೇಳೆ ಗೊತ್ತಾಗಿದೆ.

ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Oct 24, 2025 | 7:48 PM

Share

ಬೆಂಗಳೂರು, ಅಕ್ಟೋಬರ್​ 24: ರಾಜಧಾನಿ ಬೆಂಗಳೂರಲ್ಲಿ (Bengaluru) ಮಾದಕ ವಸ್ತು ಮಾರಾಟ ಜಾಲಕ್ಕೆ ಖಾಕಿ ಬಿಗ್​ ಶಾಕ್​ ಕೊಟ್ಟಿದೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು 5.5 ಕೋಟಿ ಮೌಲ್ಯದ 1.047 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮತ್ತು 3 ಕೆ.ಜಿ. ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದ್ದು, 42,800 ರೂ. ನಗದನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿದೆ.

ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಗ್ರಹದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳದ ಪಿಐ ವಿ.ಡಿ.ಶಿವರಾಜು ಮತ್ತು ಸಿಬ್ಬಂದಿ, ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 2.5 ಕೋಟಿ ರೂ. ಮೌಲ್ಯದ 1,047 ಕೆ.ಜಿ. ತೂಕದ ಎಂಡಿಎಂಎ ಕ್ರಿಸ್ಟೆಲ್ ಮತ್ತು 42,800 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಡ್ರಗ್ ಪೆಡ್ಲಿಂಗ್​ನಲ್ಲಿ ತೊಡಗಿರೋದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಬ್ಯಾಂಕಾಕ್​ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ, ಬೆಂಗಳೂರು ಏರ್​ಪೋರ್ಟ್​ನಲ್ಲಿ ಆರೋಪಿ ಲಾಕ್​

ಕೆ.ಜಿ. ನಗರ ಠಾಣಾ ವ್ಯಾಪ್ತಿಯಲ್ಲಿರುವ ಅಂಚೆ ಕಚೇರಿಗೆ ವಿದೇಶದಿಂದ ಮಾದಕ ವಸ್ತುವಿರುವ ಅನುಮಾನಾಸ್ಪದ ಪಾರ್ಸೆಲ್‌ಗಳು ಬಂದಿರುವ ಬಗ್ಗೆ ಮಾಹಿತಿ ಹಿನ್ನಲೆ, ಮಾದಕ ದ್ರವ್ಯ ನಿಗ್ರಹ ದಳದ ಪಿಐ ರಕ್ಷಿತ್ ಮತ್ತು ತಂಡ ದಾಳಿ ನಡೆಸಿದೆ. ಈ ವೇಳೆ ಅಂದಾಜು 3 ಕೋಟಿ ರೂ ಮೌಲ್ಯದ 3 ಕೆ.ಜಿ. ತೂಕದ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವಿದೇಶಿ ಕಂಪನಿಗಳ ಬಿಸ್ಕತ್​, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಮರೆಮಾಚಿ ಥೈಲ್ಯಾಂಡ್, ಫ್ರಾನ್ಸ್ ದೇಶಗಳಿಂದ ಆಮದು ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಈ ಬಗ್ಗೆ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 pm, Fri, 24 October 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು