AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eagleton Resort: ವಿದ್ಯಾರ್ಥಿಗಳು, ಟೆಕ್ಕಿಗಳು, ಉದ್ಯಮಿಗಳಿಗೆ ಡ್ರಗ್ಸ್ ತಾಣವಾಗಿದ್ದ ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ

ಆರೋಪಿ ಜಾವೇದ್ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ವಿಲ್ಲಾದಲ್ಲಿ ರುಸ್ತುಂ ಪುರ್ ಹೈಡ್ರೋ ಗಾಂಜಾ ಬೆಳೆಸುತ್ತಿದ್ದ. ಈತ ಹೈಡ್ರೋ ಗಾಂಜಾ ಬೆಳೆಯಲೆಂದೆ 36 ಸಾವಿರಕ್ಕೆ ವಿಲ್ಲಾ ಬಾಡಿಗೆಗೆ ಪಡೆದಿದ್ದ.

Eagleton Resort: ವಿದ್ಯಾರ್ಥಿಗಳು, ಟೆಕ್ಕಿಗಳು, ಉದ್ಯಮಿಗಳಿಗೆ ಡ್ರಗ್ಸ್ ತಾಣವಾಗಿದ್ದ ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ
ಈಗಲ್ಟನ್ ರೆಸಾರ್ಟ್
TV9 Web
| Updated By: ಆಯೇಷಾ ಬಾನು|

Updated on: Sep 28, 2021 | 9:24 AM

Share

ಬೆಂಗಳೂರು: ಡಿ.ಜೆ ಹಳ್ಳಿಯ ಡ್ರಗ್ಸ್ ಫ್ಯಾಕ್ಟರಿ ಭೇದಿಸಿದ್ದ ಸಿಸಿಬಿ ಅಧಿಕಾರಿಗಳು ಮತ್ತೊಂದು ಡ್ರಗ್ಸ್ ಜಾಲದ ಗ್ಯಾಂಗ್ನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ನಡೆಸಿ ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಇದುವರೆಗೂ ವಿದೇಶಗಳಿಂದ ಮಾತ್ರ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಆಗುತ್ತಿತ್ತು. ಆದ್ರೀಗ ಈಗಲ್ಟನ್ ರೆಸಾರ್ಟ್ ನ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ನನ್ನು ಸಿಸಿಬಿ ಬಂಧಿಸಿದೆ. ಈ ಬಗೆಗಿನ ಮಾಹಿತಿ ಇಲ್ಲಿದೆ.

ವಿದೇಶದಿಂದ ಹೈಬ್ರೀಡ್ ಗಾಂಜಾ ಬೀಜಗಳ ತಂದು ಹೈಡ್ರೋ ಗಾಂಜಾ ಬೆಳೆಯುತ್ತಿದ್ದ ಈ ಖತರ್ನಾಕ್ ಗ್ಯಾಂಗ್ನ ಸಿಸಿಬಿ ಭೇದಿಸಿದೆ. ಇಬ್ಬರು ಇರಾನಿ ದೇಶದ ಪ್ರಜೆಗಳು ಸೇರಿ ಒಟ್ಟು ನಾಲ್ವರನ್ನ ಬಂಧಿಸಲಾಗಿದೆ. ಆರೋಪಿಗಳಿಂದ ಬರೋಬ್ಬರಿ 150 ಹೈಡ್ರೋ ಗಾಂಜಾ ಗಿಡಗಳು, ಎರಡು ಕೋಟಿಗೂ ಅಧಿಕ ಮೌಲ್ಯದ 9 ಕೆ.ಜಿ‌. ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಆರೋಪಿ ಜಾವೇದ್ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ವಿಲ್ಲಾದಲ್ಲಿ ರುಸ್ತುಂ ಪುರ್ ಹೈಡ್ರೋ ಗಾಂಜಾ ಬೆಳೆಸುತ್ತಿದ್ದ. ಈತ ಹೈಡ್ರೋ ಗಾಂಜಾ ಬೆಳೆಯಲೆಂದೆ 36 ಸಾವಿರಕ್ಕೆ ವಿಲ್ಲಾ ಬಾಡಿಗೆಗೆ ಪಡೆದಿದ್ದ. ಕಳೆದ ಒಂದೂವರೆ ವರ್ಷದಿಂದ ವಿಲ್ಲಾದ ರೂಮ್, ಟೆರೆಸ್ ನಲ್ಲಿ ಗಾಂಜಾ ಗಿಡ ಬೆಳಿತಿದ್ದ. ಯುರೋಪ್ ನಿಂದ ಹೈಬ್ರೀಡ್ ಗಾಂಜಾ ಬೀಜಗಳನ್ನ ತರಿಸಿಕೊಂಡು ಬಳಿಕ ವ್ಯವಸ್ಥಿತವಾಗಿ ಗಾಂಜಾ ಬೀಜಗಳನ್ನ ಪ್ಲಾಂಟ್ ಮಾಡಿ ಬೆಳಿತಿದ್ದ.

ವಿದ್ಯಾರ್ಥಿಯಾಗಿ ಬಂದು ಅಕ್ರಮ ಎಜುಕೇಷನ್ ಪಡೆಯುವ ಸಲುವಾಗಿ ವಿದ್ಯಾರ್ಥಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಜಾವೇದ್ ವೆಬ್ ಸೈಟ್ ಮೂಲಕ ಹೈಡ್ರೋ ಗಾಂಜಾ ಗಿಡ ಬೆಳೆಯುವ ಬಗ್ಗೆ ಮಾಹಿತಿ ಪಡೆದಿದ್ದ. ಮೊದಲು ಬಾಣಸವಾಡಿ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿಯಲ್ಲಿ ಗಾಂಜಾ ಗಿಡ ಬೆಳೆದಿದ್ದ. ಅಲ್ಲಿ ಸಕ್ಸಸ್ ಆದ ಬಳಿಕ ನಗರದ ಹೊರವಲಯದ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಿದ್ದ.

ಆ ಬಳಿಕ ಈಗಲ್ ಟನ್ ರೆಸಾರ್ಟ್ ವಿಲ್ಲಾಗೆ ಒಂದೂವರೆ ವರ್ಷದ ಹಿಂದೆಯಷ್ಟೇ ಶಿಫ್ಟ್ ಆಗಿದ್ದ. ನಗರದಲ್ಲಿ ಪೊಲೀಸರಿಂದ ಡ್ರಗ್ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಹಿನ್ನೆಲೆ ನಗರದ ಹೊರವಲಯಕ್ಕೆ ಶಿಫ್ಟ್ ಆದ್ರೆ ಕಣ್ತಪ್ಪಿಸಿಕೊಳ್ಳಬಹುದೆಂದು ಪ್ಲಾನ್ ಮಾಡಿ ರೆಸಾರ್ಟ್ ನ ವಿಲ್ಲಾಗಳಲ್ಲಿ ಬೆಳೆದ್ರೆ ಯಾರಿಗೂ ಅನುಮಾನ ಬರುವುದಿಲ್ಲ ಎಂದು ಭಾವಿಸಿ ಇಂತಹ ಕೃತ್ಯಕ್ಕೆ ಮುಂದಾಗಿದ್ದಾನೆ.

ವೆಬ್ಸೈಟ್ಗಳ ಮೂಲಕ ಗಾಂಜಾ ಬೆಳೆಯುವ ಬಗ್ಗೆ ತರಬೇತಿ ಆರೋಪಿ ಜಾವೇದ್ ಹೈಡ್ರೋ ಗಾಂಜಾ ಬೆಳೆಯುವ ಬಗ್ಗೆ ಡೀಪ್ ಅಂಡ್ ಫುಲ್ ಸ್ಟಡಿ ಮಾಡಿದ್ದ. ಹೀಗಾಗಿ ಗಾಂಜಾ ಬೆಳೆಯಲು ಸೂಕ್ತ ವಾತಾವರಣ ನಿರ್ಮಾಣ ಮಾಡಿದ್ದ. ಸೂರ್ಯನ ಶಾಖ ಬೀಳದಂತೆ ಫ್ಯಾನ್ ಕೂಲರ್ ಇಟ್ಟು ವಿಲ್ಲಾದಲ್ಲಿ ಗಾಂಜಾ ಬೆಳೆಯಲು ವ್ಯವಸ್ಥೆ ಮಾಡಿಕೊಂಡಿದ್ದ. ಹೈಡ್ರೋ ಗಿಡ ಬೆಳೆದ ನಂತ್ರ ವಿಲ್ಲಾದಲ್ಲೇ ಅದನ್ನು ಒಣಗಿಸಿ ಪ್ಯಾಕೇಟ್ನಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ. ಒಂದು ಗ್ರಾಂ ಹೈಡ್ರೋ ಗಾಂಜಾಗೆ ನಾಲ್ಕರಿಂದ ಐದು ಸಾವಿರ ರೂ ಬೆಲೆ ಇದೆ.

ಇದನ್ನೂ ಓದಿ: ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ