AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ

ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಆರೋಪಿಗಳು ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು.

ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ
ಈಗಲ್ಟನ್ ರೆಸಾರ್ಟ್
TV9 Web
| Updated By: ಆಯೇಷಾ ಬಾನು|

Updated on:Sep 28, 2021 | 1:02 PM

Share

ಬೆಂಗಳೂರು: ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ಕೇಸ್ಗೆ ಸಂಬಂಧಿಸಿ ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಬ್ಬರು ಇರಾನ್ ದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದರು. ಜಾವದ್ ರೋಸ್ಟಂಪೌರ್, ಬಾಬಕ್ ಶಿರ್ಮೊಹಮ್ಮಾದಿ, ಮೋಸಿನ್ ಖಾನ್, ಮೋಸಿನ್ ಉಝ್ ಝಮಾನ್ ಬಂಧಿತರು.

ಆರೋಪಿಗಳು ಡಾರ್ಕ್ ವೆಬ್ ಸೈಟ್ನಲ್ಲಿ ಹೈಡ್ರೋ ಗಾಂಜಾ ಬೀಜಗಳನ್ನ ತರಿಸಿಕೊಳ್ತಿದ್ದರು. ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು. ಸೆಪ್ಟೆಂಬರ್ 26 ರಂದು ಡಿ.ಜೆ ಹಳ್ಳಿಯ ಕಾವೇರಿನಗರದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎಲ್.ಎಸ್.ಡಿ, ಹೈಡ್ರೋ ಗಾಂಜಾ ಸಮೇತ ಸಿಸಿಬಿ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಮತ್ತೊಂದೆಡೆ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಉದ್ಯಮಿಗಳಿಗೆ ಸಿಂಥೆಟಿಕ್ ಡ್ರಗ್ ಹಾಗೂ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ರು. ಸದ್ಯ ಬಂಧಿತರಿಂದ 130 ಹೈಡ್ರೋ ಗಾಂಜಾ ಗಿಡಗಳು, ಯುವಿ ಲೈಟ್ಸ್, ಎಲ್.ಇ.ಡಿ ಲ್ಯಾಂಪ್ಸ್, ಎಲೆಕ್ಟ್ರಿಕಲ್ ವೆಯ್ಟಿಂಗ್ ಮಷಿನ್, 1 ಕೋಟಿ ಬೆಲೆಯ 12 ಕೆಜಿ 850 ಗ್ರಾಂ ತೂಕದ ಹೈಡ್ರೋ ಗಾಂಜಾ, ಒಂದು ಸ್ಕೋಡಾ ಕಾರು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇರಾನಿ ಮೂಲದ ಜಾವೀದ್ ರುಸ್ತುಂ ವಿರುದ್ಧ ಈ‌ ಹಿಂದೆ ಯಶವಂತಪುರ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಬಂಧಿತ ನಾಲ್ವರ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

Saundatti Yellamma Temple: 18 ತಿಂಗಳ ಬಳಿಕ ಸವದತ್ತಿ ರೇಣುಕಾ ಯಲಮ್ಮ ದೇವಾಲಯ ಓಪನ್, ದರ್ಶನಕ್ಕೆ ಷರತ್ತು ಬದ್ಧ ಅನುಮತಿ

Published On - 7:50 am, Tue, 28 September 21

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್