AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ

ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಆರೋಪಿಗಳು ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು.

ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ
ಈಗಲ್ಟನ್ ರೆಸಾರ್ಟ್
TV9 Web
| Edited By: |

Updated on:Sep 28, 2021 | 1:02 PM

Share

ಬೆಂಗಳೂರು: ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ಕೇಸ್ಗೆ ಸಂಬಂಧಿಸಿ ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಬ್ಬರು ಇರಾನ್ ದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದರು. ಜಾವದ್ ರೋಸ್ಟಂಪೌರ್, ಬಾಬಕ್ ಶಿರ್ಮೊಹಮ್ಮಾದಿ, ಮೋಸಿನ್ ಖಾನ್, ಮೋಸಿನ್ ಉಝ್ ಝಮಾನ್ ಬಂಧಿತರು.

ಆರೋಪಿಗಳು ಡಾರ್ಕ್ ವೆಬ್ ಸೈಟ್ನಲ್ಲಿ ಹೈಡ್ರೋ ಗಾಂಜಾ ಬೀಜಗಳನ್ನ ತರಿಸಿಕೊಳ್ತಿದ್ದರು. ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು. ಸೆಪ್ಟೆಂಬರ್ 26 ರಂದು ಡಿ.ಜೆ ಹಳ್ಳಿಯ ಕಾವೇರಿನಗರದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎಲ್.ಎಸ್.ಡಿ, ಹೈಡ್ರೋ ಗಾಂಜಾ ಸಮೇತ ಸಿಸಿಬಿ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಮತ್ತೊಂದೆಡೆ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಉದ್ಯಮಿಗಳಿಗೆ ಸಿಂಥೆಟಿಕ್ ಡ್ರಗ್ ಹಾಗೂ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ರು. ಸದ್ಯ ಬಂಧಿತರಿಂದ 130 ಹೈಡ್ರೋ ಗಾಂಜಾ ಗಿಡಗಳು, ಯುವಿ ಲೈಟ್ಸ್, ಎಲ್.ಇ.ಡಿ ಲ್ಯಾಂಪ್ಸ್, ಎಲೆಕ್ಟ್ರಿಕಲ್ ವೆಯ್ಟಿಂಗ್ ಮಷಿನ್, 1 ಕೋಟಿ ಬೆಲೆಯ 12 ಕೆಜಿ 850 ಗ್ರಾಂ ತೂಕದ ಹೈಡ್ರೋ ಗಾಂಜಾ, ಒಂದು ಸ್ಕೋಡಾ ಕಾರು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇರಾನಿ ಮೂಲದ ಜಾವೀದ್ ರುಸ್ತುಂ ವಿರುದ್ಧ ಈ‌ ಹಿಂದೆ ಯಶವಂತಪುರ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಬಂಧಿತ ನಾಲ್ವರ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

Saundatti Yellamma Temple: 18 ತಿಂಗಳ ಬಳಿಕ ಸವದತ್ತಿ ರೇಣುಕಾ ಯಲಮ್ಮ ದೇವಾಲಯ ಓಪನ್, ದರ್ಶನಕ್ಕೆ ಷರತ್ತು ಬದ್ಧ ಅನುಮತಿ

Published On - 7:50 am, Tue, 28 September 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್